ಸುಬ್ರತಾ ರಾಯ್ 
ದೇಶ

ಸುಬ್ರತಾ ರಾಯ್ ಗೆ ಮತ್ತೆ 10 ದಿನ ಅವಕಾಶ ನೀಡಿದ ಸುಪ್ರೀಂ ಕೋರ್ಟ್

ಸಾಲ ಮರುಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರಿಗೆ 709, 82 ಕೋಟಿ ರುಪಾಯಿ ಠೇವಣಿ ಮಾಡಲು....

ನವದೆಹಲಿ: ಸಾಲ ಮರುಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರಿಗೆ 709, 82 ಕೋಟಿ ರುಪಾಯಿ ಠೇವಣಿ ಮಾಡಲು ಸುಪ್ರೀಂ ಕೋರ್ಟ್ ಮತ್ತೆ 10 ದಿನಗಳ ಕಾಲವಕಾಶ ನೀಡಿ, ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 5ರ ವರೆಗೆ ವಿಸ್ತರಿಸಿದೆ.
ಸೇಬಿಗೆ ಜೂನ್.19ರೊಳಗಾಗಿ 1, 500 ಕೋಟಿ ರುಪಾಯಿ ಠೇವಣಿ ಮಾಡುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ಆದೇಶಿಸುತ್ತಿತ್ತು. ಅಲ್ಲದೆ ಠೇವಣಿ ಮಾಡದಿದ್ದರೆ ಜೈಲಿಗೆ ಹೋಗಬೇಕಾಗುತ್ತೆ ಎಂದು ಎಚ್ಚರಿಸಿತ್ತು. 
ಪ್ರಕರಣ ಸಂಬಂಧ ಇಂದು ರಾಯ್ ಪರವಾಗಿ ವಿಚಾರಣೆ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಈಗಾಗಲೇ 790.18 ಕೋಟಿ ರುಪಾಯಿ ಸೇಬಿಗೆ ಠೇವಣಿ ಮಾಡಲಾಗಿದ್ದು, ಉಳಿದ ಹಣವನ್ನು ಠೇವಣಿ ಮಾಡಲು 10 ದಿನ ಕಾಲವಕಾಶ ಬೇಕು ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಸ್ರಾ ಹಾಗೂ ರಂಜನ್ ಗೋಗೋಯಿ ಅವರಿಗೆ ಮನವಿ ಮಾಡಿದರು. 
ಕಪಿಲ್ ಸಿಬಲ್ ಅವರ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಸಬ್ರತಾ ರಾಯ್ ಮತ್ತೆ 10 ದಿನ ಕಾಲವಕಾಶ ನೀಡಿದೆ.
ವಸತಿ ಯೋಜನೆ ಹೆಸರಿನಲ್ಲಿ ಸಾರ್ವಜನಿಕ ಹೂಡಿಕೆದಾರರನ್ನು ವಂಚಿಸಿ, ಹೂಡಿಕೆ ಹಣ ಹಿಂದಿರುಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನುರಹಿತ ವಾರಂಟ್ ಹೊರಡಿಸಿ ಬಂಧನಕ್ಕೆ ಆದೇಶ ನೀಡಿತ್ತು. ಇದಾದ ಬಳಿಕ ತಲೆಮರೆಸಿಕೊಂಡಿದ್ದ ಸುಬ್ರತಾರಾಯ್ ಅವರು ಲಖನೌದಲ್ಲಿ ಪೊಲೀಸರ ಎದುರು ಶರಣಾಗಿ ಜೈಲು ಪಾಲಾಗಿದ್ದರು. 
2014ರಲ್ಲಿ ಬಂಧಿತರಾಗಿದ್ದ ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಅವರಿಗೆ ಸುಪ್ರೀಂಕೋರ್ಟ್ ಕಳೆದ ವರ್ಷ ಮಧ್ಯಂತರ ಜಾಮೀನು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT