ಶಿವಸೇನೆ 
ದೇಶ

ಪಾಕ್ ವಿರುದ್ಧ ಆಟವಾಡಲು ಭಾರತ ತಂಡ ವಿರೋಧ ವ್ಯಕ್ತಪಡಿಸಬೇಕಿತ್ತು: ಗಂಭೀರ್'ಗೆ ಶಿವಸೇನೆ

ಪಾಕಿಸ್ತಾನದ ವಿರುದ್ಧ ಆಟ ಆಡಲು ವಿರೋಧ ವ್ಯಕ್ತಪಡಿಸಿದ್ದೇ ಆಗಿದ್ದರೆ ದೇಶದ ಜನತೆ ಭಾರತ ಕ್ರಿಕೆಟ್ ತಂಡವನ್ನು ಮತ್ತಷ್ಟು ಗೌರವಿಸುತ್ತಿತ್ತು ಎಂದು ಶಿವಸೇನೆ ಸೋಮವಾರ...

ಮುಂಬೈ: ಪಾಕಿಸ್ತಾನದ ವಿರುದ್ಧ ಆಟ ಆಡಲು ವಿರೋಧ ವ್ಯಕ್ತಪಡಿಸಿದ್ದೇ ಆಗಿದ್ದರೆ ದೇಶದ ಜನತೆ ಭಾರತ ಕ್ರಿಕೆಟ್ ತಂಡವನ್ನು ಮತ್ತಷ್ಟು ಗೌರವಿಸುತ್ತಿತ್ತು ಎಂದು ಶಿವಸೇನೆ ಸೋಮವಾರ ಹೇಳಿದೆ. 
ಈ ಹಿಂದಷ್ಟೇ ಭಾರತದ ತಂಡ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಕಾಶ್ಮೀರ ಪ್ರತ್ಯೇಕತಾವಾಗಿ ಮಿರ್'ವಾಯಿಜ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದರು, 
ಪಾಕಿಸ್ತಾನಕ್ಕೆ ಅಭಿನಂದನೆ ಸಲ್ಲಿಸುತ್ತಿರುವ ಮಿರ್'ವಾಯಿಜ್ ಅವರು ಗಂಟು ಮೂಟೆ ಕಟ್ಟಿಕೊಂಡು ಗಡಿ ದಾಟಿ ಪಾಕಿಸ್ತಾನಕ್ಕೇ ಹೋಗಲಿ ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ, ಸಂಜನ್ ರಾವತ್ ಅವರು, ಯಾವುದೇ ವೇದಿಕೆಯೇ ಆಗಲೀ ಪಾಕಿಸ್ತಾನದ ಜೊತೆಗೆ ಶೂನ್ಯ ಸಂಬಂಧ ಹೊಂದಲು ಇಡೀ ದೇಶ ಬಯಸುತ್ತದೆ. ಯಾರೊಬ್ಬರ ದೇಶ ಪ್ರೇಮದ ಕುರಿತಂತೆಯೂ ನಾನು ಪ್ರಶ್ನೆ ಹಾಕುವುದಿಲ್ಲ. ಆದರೆ, ಮಿರ್ ವಾಯಿಜ್ ರಂತಹ ಜನರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವುದು ಬಹಳ ಸುಲಭ. ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಇಚ್ಚಿಸುತ್ತಿಲ್ಲ. ಆದರೆ, ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಲು ವಿರೋಧ ವ್ಯಕ್ತಪಡಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ. 
ಯಾವುದೇ ಒಬ್ಬ ಆಟಗಾರ ಪಾಕಿಸ್ತಾನದ ವಿರುದ್ಧ ಆಟವಾಡಲು ವಿರೋಧ ವ್ಯಕ್ತಪಡಿಸಿದ್ದೇ ಆಗಿದ್ದರೆ, ದೇಶದ ಜನತೆಗೆ ಭಾರತ ಕ್ರಿಕೆಟ್ ತಂಡದ ಮೇಲಿರುವ ಗೌರವ ಮತ್ತಷ್ಟು ಹೆಚ್ಚಾಗುತ್ತಿತ್ತು. ಮಿರ್ ವಾಯಿಜ್ ರಂತಹಪ್ರತ್ಯೇಕತಾವಾದಿಗಳು ಯಾವಾಗಲೂ ಪಾಕಿಸ್ತಾನದ ಪರವಾಗಿಯೇ ಇರುತ್ತಾರೆ. ಭಾರತದಲ್ಲಿದ್ದುಕೊಂಡು ಆವರು ಪಾಕಿಸ್ತಾನದ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಹಾಗೂ ಅವರ ವರ್ತನೆಯನ್ನು ಸರ್ಕಾರ ಗಮನಿಸಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT