ಸಿಎಸ್ ಕರ್ಣನ್ 
ದೇಶ

ತಲೆ ಮರೆಸಿಕೊಂಡಿದ್ದ ನ್ಯಾ. ಸಿಎಸ್ ಕರ್ಣನ್ ಬಂಧನ

ನ್ಯಾಯಾಂಗ ನಿಂದನೆ ಆರೋಪದಡಿ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್...

ಕೊಯಮತ್ತೂರು: ನ್ಯಾಯಾಂಗ ನಿಂದನೆ ಆರೋಪದಡಿ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. 
ಮೇ 9ರಂದು ಕರ್ಣನ್ ನಾಪತ್ತೆಯಾಗಿದ್ದು ಅವರನ್ನು ಬಂಧಿಸಲು ಪಶ್ಚಿಮ ಬಂಗಾಳದ ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ಅಂತಿಮವಾಗಿ ಕೊಯಮತ್ತೂರಿನಲ್ಲಿ ಸಿಐಡಿ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. 
ಭಾರತೀಯ ನ್ಯಾಯಾಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಛ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT