ಅಖಿಲೇಶ್ ಯಾದವ್ ಮತ್ತು ಮಾಯಾವತಿ 
ದೇಶ

ಪ್ರಧಾನಿ ಭೋಜನಕೂಟಕ್ಕೆ ಅಖಿಲೇಶ್ ಮಾಯಾವತಿ ಗೈರು: ಮುಲಾಯಂ ಹಾಜರು

ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆಯೋಜಿಸಿದ್ದ ಭೋಜನ ಕೂಟಕ್ಕೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿಗಳಾದ...

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆಯೋಜಿಸಿದ್ದ ಭೋಜನ ಕೂಟಕ್ಕೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್, ಮಾಯಾವತಿ ಮತ್ತು ಮುಲಾಯಂ ಸಿಂಗ್ ಯಾದವ್ ಅವರುಗಳನ್ನು ಆಹ್ವಾನಿಸಲಾಗಿತ್ತು.
ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವಂತೆ ಕೋರುವ ಉದ್ದೇಶದಿಂದ ಈ ಭೋಜನ ಕೂಟವನ್ನು ಆಯೋಜಿಸಲಾಗಿತ್ತು. 
ಅಖಿಲೇಶ್ ಯಾದವ್ ಮತ್ತು ಮಾಯಾವತಿ ಭೋಜನಕೂಟದಿಂದ ದೂರವೇ ಉಳಿದರು. ಆದರೆ ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಎಲ್ಲರಿಗಿಂತ ಮೊದಲು ಸಿಎಂ ನಿವಾಸಕ್ಕೆ ಆಗಮಿಸಿದರು. ನಂತರ  ರಾಜ್ಯಪಾಲ ರಾಮ್ ನಾಯಕ್ ಮತ್ತು ಇಬ್ಬರು ಉಪ ಮುಖ್ಯಮಂತ್ರಿಗಳು ಮತ್ತು ಯೋಗಿ ಆದಿತ್ಯನಾಥ್ ಸಂಪುಟ ಸಹೋದ್ಯೋಗಿಗಳು ಮತ್ತು ಅನೇಕ ಬಿಜೆಪಿ ಮುಖಂಡರು ಆಗಮಿಸಿದರು.
ಸುಮಾರು 100 ಮಂದಿಗೆ ಆಹ್ವಾನ ನೀಡಲಾಗಿತ್ತು. ಪ್ರಮುಖ ಮುಸ್ಲಿಂ ನಾಯಕರು, ಬುದ್ದಿಜೀವಿಗಳು, ಸೇರಿದಂತೆ ಹಲವರು ಪ್ರಧಾನಿ ಮೋದಿ ಅವರಿಗಾಗಿ ಏರ್ಪಡಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡಿದ್ದರು.
ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ಅವರನ್ನು ಬಿಜೆಪಿ ಘೋಷಿಸಿರುವುದು ತಮಗೆ ಸಂತಸ ತಂದಿದೆ ಎಂದು ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ರಾಮನಾಥ್ ಉತ್ತಮ ಅಭ್ಯರ್ಥಿ, ಅವರನ್ನು ನಾನು ಬಹಳ ಹಿಂದಿನಿಂದಲೂ ನೋಡಿದ್ದೇನೆ, ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿಗೆ ಹೆಚ್ಚಿನ ಬಹುಮತವಿದೆ, ವಿರೋಧ ಪಕ್ಷಗಳು ಯಾವ ನಿರ್ಧಾರ ಕೈಗೊಳ್ಳಲಿವೆ ಎಂಬುದನ್ನು ನಾನು ಹೇಳಲು ಸಾಧ್ಯವಿಲ್ಲ ಎಂದು ಮುಲಾಯಂ ಹೇಳಿದ್ದಾರೆ,
ತಮ್ಮ ಮಗ ಅಖಿಲೇಶ್ ಜೊತೆ ಭಿನ್ನಾಭಿಪ್ರಾಯ ಇರುವುದು ನಿಜ ಎಂದು ಮುಲಾಯಂ ಒಪ್ಪಿಕೊಂಡಿದ್ದಾರೆ. ತಮ್ಮ ನಿರ್ಧಾರವನ್ನು ಜೂನ್ 22 ರ ನಂತರ ಅಂದರೆ ವಿರೋಧ ಪಕ್ಷಗಳ ಜೊತೆಗಿನ ಸಭೆಯ ನಂತರ ಪ್ರಕಟಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ. 
ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿರುವುದನ್ನು  ಬಿಎಸ್ ಪಿ ನಾಯಕಿ ಮಾಯಾವತಿ ಸ್ವಾಗತಿಸಿದ್ದಾರೆ. ಆದರೂ ಅವರು ಭೋಜನ ಕೂಟಕ್ಕೆ ಹಾಜರಾಗಿರಲಿಲ್ಲ. ಶಿವಸೇನೆ ಕೂಡ ಕೋವಿಂದ್ ಅವರಿಗೆ ತನ್ನ ಬೆಂಬಲ ಸೂಚಿಸಿದೆ.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕುರಿತು ಹಲವು ತಿಂಗಳುಗಳ ಕಾಲ ನಡೆದ ಊಹೆ, ಎಣಿಕೆಗಳಿಗೆ ಬಿಜೆಪಿ ಕೊನೆಗೂ ತೆರೆ ಎಳೆದಿದೆ. ತನ್ನ ಎಂದಿನ ಅನಿರೀಕ್ಷಿತ ಹಾಗೂ ಬೆರಗು ಮೂಡಿಸುವ ಶೈಲಿಯಲ್ಲಿಯೇ ಅಭ್ಯರ್ಥಿ ಹೆಸರು ಪ್ರಕಟಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT