ಯೋಗ ದಿನಾಚರಣೆ ಕುರಿತಂತೆ ಜನತೆಯನ್ನುದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಸಾವಿರಾರು ಜನರ ಜೊತೆ ಪ್ರಧಾನಿ ಮೋದಿ ಯೋಗಾಭ್ಯಾಸ

ದೇಶದಾದ್ಯಂತ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಯೋಗ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ...

ಲಖನೌ: ದೇಶದಾದ್ಯಂತ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಯೋಗ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾವಿರಾರು ಜನರ ಜೊತೆ ಲಖನೌದಲ್ಲಿ ಯೋಗಾಭ್ಯಾಸ ಮಾಡಿದರು. 

ಲಖನೌದ ರಮಾಭಾಯ್ ಅಂಬೇಡ್ಕರ್ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ಮಾಡಿದರು. 

ಬೆಳಿಗ್ಗೆ 6.30ರ ಸುಮಾರಿಗೆ ಆಗಮಿಸಿದ ಸಾವಿರಾರು ಜನರು ವಂದೇ ಮಾತರಂ ಘೋಷಣೆಯೊಂದಿಗೆ ಮಳೆಯ ನಡುವೆಯೂ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ಯೋಗ ದಿನಾಚರಣೆ ಹಿನ್ನಲೆಯಲ್ಲಿ ಜನತೆಯನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿಯವರು ಅಂತರಾಷ್ಟ್ರೀಯ ಯೋಗ ದಿನಾಚರಣೆ 2017ಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಹಾಗೂ ಇಡೀ ವಿಶ್ವದ ಜನತೆಗೆ ಈ ಮೂಲಕ ಶುಭಾಶಯಗಳನ್ನು ಹೇಳುತ್ತಿದ್ದೇನೆ. ಯೋಗ ಇಂದು ವಿಶ್ವವನ್ನು ಒಗ್ಗೂಡಿಸುವಲ್ಲಿ ಅತ್ಯಂತ ಮುಖ್ಯ ಪಾತ್ರವಹಿಸಿದೆ ಎಂದು ಹೇಳಿದ್ದಾರೆ. 
ಕಳೆದ ಮೂರು ವರ್ಷಗಳಿಂದ ಸಾಕಷ್ಟು ಯೋಗ ಸಂಸ್ಥೆಗಳು ಆರಂಭಗೊಂಡಿವೆ. ಇದು ನನಗೆ ಸಾಕಷ್ಟು ಸಂತಸವನ್ನು ತಂದಿದೆ. ಯೋಗ ಶಿಕ್ಷಕರ ಬೇಡಿಕೆಗಳು ಕೂಡ ಹೆಚ್ಚಾಗಿದೆ. ಆರೋಗ್ಯ ಹಾಗೂ ಶಕ್ತಿ-ಯುಕ್ತಿಯಿಂದ ಇರುವುದು ಅತ್ಯಂತ ಪ್ರಮುಖವಾದದ್ದು. ಉತ್ತಮ ಆರೋಗ್ಯ ಸಾಧಿಸಲು ಯೋಗ ಉತ್ತಮವಾದ ದಾರಿಯಾಗಿದೆ ಎಂದು ತಿಳಿಸಿದ್ದಾರೆ. 

ನಂತರ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಳೆಯ ನಡುವೆಯೂ ತಾಳ್ಮೆಯಿಂದ ಕೆಲಸ ಮಾಡುತ್ತಿರುವ ಸ್ವಯಂ ಸೇವಕರಿಗೆ ಧನ್ಯವಾದಗಳು. ಯೋಗ ಜೀವನದ ಕಲೆಯಾಗಿದೆ. ಒಗ್ಗಟ್ಟಿನ ಮಂತ್ರವನ್ನು ಯೋಗ ಹೇಳಿಕೊಡುತ್ತದೆ. ಯೋಗ ನಮ್ಮ ಸಂಸ್ಕೃತಿ ಭಾಗವಾಹಿದ್ದು, ಒಗ್ಗಟ್ಟಿನಿಂದ ಇರುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. 

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಈ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆ, ಸರ್ಕಾರೇತರ ಸಂಸ್ಥೆಗಳು, ಯೋಗ ಗುರುಗಳು ಮಳೆಯ ನಡುವೆಯೂ ಸುಮಾರು 80 ನಿಮಿಷಗಳ ಕಾಲ ಯೋಗಾಭ್ಯಾಸವನ್ನು ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT