ಥಾಣೆ-ಬದ್ಲಾಪುರ್ ಹೆದ್ದಾರಿಯಲ್ಲಿ ಪ್ರತಿಭಟನಾಕಾರರಿಂದ ದಾಂಧಲೆ 
ದೇಶ

ಮುಂಬೈ: ನೌಕಾಪಡೆಯ ಭೂ ಸ್ವಾಧೀನಕ್ಕೆ ಆಕ್ರೋಶ; ರೈತರಿಂದ ಪ್ರತಿಭಟನೆ, ವಾಹನಗಳಿಗೆ ಬೆಂಕಿ!

ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ.

ಮೂಲಗಳ ಪ್ರಕಾರ ಭಾರತೀಯ ನೌಕಾಪಡೆ ಸುಮಾರು 17 ಗ್ರಾಮಗಳ ರೈತರ ನೂರಾರು ಎಕರೆ ಕೃಷಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿ ನೂರಾರು ರೈತರು ಹೆದ್ದಾರಿ ತಡೆ ನಡೆಸಿದ್ದಾರೆ. ಈ  ವೇಳೆ ಕೆಲ ಆಕ್ರೋಶಿತ ರೈತರು ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗಲಭೆ ನಿಯಂತ್ರಣಕ್ಕೆ ಪೊಲೀಸರು  ಹರಸಾಹಸ ಪಡುತ್ತಿದ್ದಾರೆ.

ಇನ್ನು ರೈತರ ಗಲಭೆ ನಿಯಂತ್ರಣಕ್ಕಾಗಿ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳಿಗೆ ಬುಲಾವ್ ನೀಡಲಾಗಿದ್ದು, ಶೀಘ್ರದಲ್ಲೇ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳು ರಕ್ಷಣೆ ನಿಯೋಜನೆಯಾಗಲಿವೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT