ಬಂದಿತ ಆರೋಪಿಗಳು 
ದೇಶ

ಪಾಕ್ ಪರ ಘೋಷಣೆ: ಬಂಧಿತ 15 ಮಂದಿಯ ವಿರುದ್ಧದ ದೇಶದ್ರೋಹ ಆರೋಪ ಕೈಬಿಟ್ಟಿ ಮಧ್ಯಪ್ರದೇಶ

ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನದ....

ಬುರ್ಹಾನ್ಪುರ್: ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನದ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಆರೋಪದ ಮೇಲೆ ಬಂಧಿಸಲಾಗಿದ್ದ 15 ಮುಸ್ಲಿಂ ಯುವಕರ ವಿರುದ್ಧದ ದೇಶದ್ರೋಹದ ಆರೋಪವನ್ನು ಕೈಬಿಡಲು ಮಧ್ಯಪ್ರದೇಶ ಸರ್ಕಾರ ಗುರುವಾರ ನಿರ್ಧರಿಸಿದೆ.
ಎಎನ್ಐ ವರದಿಯ ಪ್ರಕಾರ, ಹಿರಿಯ ಅಧಿಕಾರಿಗಳ ಸಲಹೆ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಮಧ್ಯಪ್ರದೇಶ ಪೊಲೀಸರು ಹಿಂಪಡೆದಿದ್ದಾರೆ.
ಈ ಮಧ್ಯೆ ಬಂಧಿತ 15 ಆರೋಪಿಗಳ ವಿರುದ್ಧ ಕೋಮು ಸಾಮರಸ್ಯ ಕದಡಲು ಯತ್ನಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷೆನ್ 153ಎ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂನ್ 18ರಂದು ಚ್ಯಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ನಂತರ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಈ 15 ಮಂದಿಯನ್ನು ದೇಶದ್ರೋಹದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT