ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ನಾಗರಿಕ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಿ ಸೆಕ್ಟರ್ ನಲ್ಲಿ ಗುರುವಾರ ನಿರಂತರ ಆರು ಗಂಟೆಗಳ ಕಾಲ ನಡೆದ ಎನ್ ಕೌಂಟರನ್....

ಪುಲ್ವಂ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಿ ಸೆಕ್ಟರ್ ನಲ್ಲಿ ಗುರುವಾರ ನಿರಂತರ ಆರು ಗಂಟೆಗಳ ಕಾಲ ನಡೆದ ಎನ್ ಕೌಂಟರನ್ ನಲ್ಲಿ ಭಾರತೀಯ ಸೇನೆ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಈ ವೇಳೆ ಓರ್ವ ನಾಗರಿಕ ಸಹ ಮೃತಪಟ್ಟಿದ್ದಾರೆ.
ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದ ವೇಳೆ ಮೃತಪಟ್ಟ ನಾಗರಿಕ ತಾವ್ಸೀಪ್ ಹಸನ್ ಎಂದು ಗುರುತಿಸಲಾಗಿದ್ದು, ಇತ ಒಬ್ಬ ದೀರ್ಘಕಾಲದ ಕಲ್ಲು ತೂರಾಟಗಾರ ಎಂದು ಪೊಲೀಸರು ತಿಳಿಸಿದ್ದಾರೆ. 
ಹಸನ್ ಒಬ್ಬ ಕಲ್ಲು ತೂರಾಟಗಾರನಾಗಿದ್ದು, ಆತನ ವಿರುದ್ಧ 10 ಕೇಸ್ ಗಳು ದಾಖಲಾಗಿವೆ. ಹಸನ್ ನನ್ನು 2010 ಮತ್ತು 2016ರಲ್ಲಿ ಎರಡು ಬಾರಿ ಬಂಧಿಸಲಾಗಿತ್ತು. ಹಸನ್ ತನ್ನ ಪ್ರದೇಶದಲ್ಲಿ ಛೋಟಾ ಗೀಲಾನಿ ಎಂದೇ ಗುರುತಿಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆ ಕೇರನ್ ಸೆಕ್ಟರ್ ನಲ್ಲಿ ಉಗ್ರರ ಗಡಿ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT