ನೌಕಾಪಡೆ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದು 
ದೇಶ

75 ವರ್ಷಗಳಿಂದ ರೈತರು ಬೇಸಾಯ ಮಾಡುತ್ತಿದ್ದರೂ ದಾಖಲೆಯಲ್ಲಿ ಭೂಮಿ ರಕ್ಷಣಾ ಇಲಾಖೆಗೆ ಸೇರಿದ್ದು!

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ತಾಲ್ಲೂಕಿನ ನೆವಲಿ ಏರ್ ಸ್ಟ್ರಿಪ್ ಹತ್ತಿರ ಇರುವ 1,600 ಎಕರೆಗೂ...

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ತಾಲ್ಲೂಕಿನ ನೆವಲಿ ಏರ್ ಸ್ಟ್ರಿಪ್ ಹತ್ತಿರ ಇರುವ 1,600 ಎಕರೆಗೂ ಅಧಿಕ ವಿವಾದಿತ ಭೂಮಿಯಲ್ಲಿ ಕಳೆದ 75 ವರ್ಷಗಳಿಂದ ರೈತರು ವ್ಯವಸಾಯ ಮಾಡುತ್ತಾ ಬಂದಿದ್ದಾರೆ. ಆದರೆ ರಕ್ಷಣಾ ಸಚಿವಾಲಯದ ದಾಖಲೆಗಳಲ್ಲಿ ಎಲ್ಲಾ ಭೂಮಿಗಳು ಇಲಾಖೆಯ ಹೆಸರಲ್ಲಿದೆ.
ನಮ್ಮ ಪೂರ್ವಜರ ಕಾಲದಿಂದಲೇ ಈ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದೇವೆ. 2ನೇ ವಿಶ್ವಯುದ್ಧದ ಸಮಯದಲ್ಲಿ ಈ ಭೂಮಿಯನ್ನು ಬ್ರಿಟಿಷ್ ಸರ್ಕಾರ ವಶಪಡಿಸಿಕೊಂಡಿತ್ತು ಎಂದು ನಾವು ಕೂಡ ಕೇಳಿದ್ದೆವು. ಆದರೆ ವಿಶ್ವಯುದ್ಧದ ನಂತರ ಭೂಮಿಯನ್ನು ಮತ್ತೆ ನಮಗೆ ಹಿಂತಿರುಗಿಸಲಾಯಿತು ಎಂದು ನಮ್ಮ ಪೂರ್ವಜರು ಹೇಳುತ್ತಿದ್ದರು. ಅಲ್ಲಿಂದ ನಾವು ಈ ಭೂಮಿಯಲ್ಲಿ ವ್ಯವಸಾಯ ಮಾಡಿಕೊಂಡು ಬಂದಿದ್ದೇವೆ ಎಂದು ರೈತರ ಸಂಘಟನೆಯಾದ ಶ್ರೀ ಮಲಂಗದ್ದ್ ಪರಿಸರ್ ಜಮೀನ್ ಬಚಾವ್ ಆಂದೋಲನ ಸಮಿತಿಯ ಅಧ್ಯಕ್ಷ ಮಾಥುರ್ ಮಟ್ರೆ ತಿಳಿಸಿದ್ದಾರೆ.
ರಕ್ಷಣಾ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಕಮಾಂಡರ್ ರಾಹುಲ್ ಸಿನ್ಹಾ ನಿನ್ನೆ ಮುಂಬೈಯಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, ಭೂಮಿಯು ರಕ್ಷಣಾ ಸಚಿವಾಲಯ/ಭಾರತೀಯ ನೌಕಾಪಡೆ ಮತ್ತು ರಾಜ್ಯ ಸರ್ಕಾರಕ್ಕೆ ಸೇರಿದ್ದಾಗಿದೆ. 7/12 ಉದ್ಧರಣಗಳು ರಕ್ಷಣಾ ಇಲಾಖೆಗೆ ಸೇರಿದ್ದಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT