ದೆಹಲಿ-ನೇಪಾಳ ಬಸ್ ಸಂಪರ್ಕ 
ದೇಶ

ನೇಪಾಳಕ್ಕೆ ನೇರ ಬಸ್ ಸಂಪರ್ಕ ಕಲ್ಪಿಸಲು ಉತ್ತರಾಖಂಡ್ ರಾಜ್ಯದ ಚಿಂತನೆ

ಉತ್ತರಾಖಂಡ್ ನಿಂದ ನೇಪಾಳಕ್ಕೆ ನೇರ ಬಸ್ ಸಂಪರ್ಕ ಕಲ್ಪಿಸಲು ಉತ್ತರಾಖಂಡ್ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಡೆಹ್ರಾಡೂನ್: ಉತ್ತರಾಖಂಡ್ ನಿಂದ ನೇಪಾಳಕ್ಕೆ ನೇರ ಬಸ್ ಸಂಪರ್ಕ ಕಲ್ಪಿಸಲು ಉತ್ತರಾಖಂಡ್ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 
ಈ ಬಗ್ಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಈ ವರೆಗೂ ರಾಜ್ಯದಿಂದ ನೇಪಾಳಕ್ಕೆ ನೇರ ಬಸ್ ಸಂಪರ್ಕ ಇರಲಿಲ್ಲ. ಉತ್ತರಾಖಂಡ್ ನಿಂದ ನೇಪಾಳಕ್ಕೆ ತೆರಳಬೇಕಿದ್ದರೆ, ನವದೆಹಲಿ ಮೂಲಕ ಸಂಚರಿಸಬೇಕಿತ್ತು. ಆದರೆ ನೇಪಾಳ ಮೂಲದವರು ಉತ್ತರಾಖಂಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗಾಗಿ ನೇಪಾಳಕ್ಕೆ ನೇರ ಬಸ್ ಸಂಪರ್ಕವನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 
ನವದೆಹಲಿಯಿಂದ ಕಠ್ಮಂಡುವಿಗೆ ಮೂರು ಬಸ್ ಗಳು ಸಂಚರಿಸುತ್ತಿದ್ದು, ಈ ಪೈಕಿ 2 ಉತ್ತರಾಖಂಡ್ ರಸ್ತೆ ಸಾರಿಗೆಗೆ ಸಂಬಂಧಪಟ್ಟಿದ್ದಾಗಿದೆ. ನೇಪಾಳಕ್ಕೆ ಉತ್ತರಾಖಂಡ್ ನಿಂದ ನೇರ ಬಸ್ ಸಂಪರ್ಕ ಕಲ್ಪಿಸುವುದಕ್ಕೆ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ಸರ್ಕಾರ ನೇರ ಸಂಪರ್ಕ ಕಲ್ಪಿಸುವ ಬಸ್ ಸೌಲಭ್ಯವನ್ನು ಪ್ರಾರಂಭಿಸುವುದರ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

Dhurandhar 2 ಬಾಕ್ಸ್ ಆಫೀಸ್ ಆರ್ಭಟಕ್ಕೆ ಬೆದರಿದ 'ಭೂತ್ ಬಂಗ್ಲಾ'; ಬಿಡುಗಡೆ ಏಪ್ರಿಲ್ 16ಕ್ಕೆ ಮುಂದೂಡಿಕೆ

Namma Metro: ಏ.5 ರಂದು ಈ ಮಾರ್ಗದಲ್ಲಿ ಮೆಟ್ರೋ ರೈಲು ಎರಡು ಗಂಟೆ ಸ್ಥಗಿತ! ಸಂಜೆ ಸೇವಾವಧಿ ವಿಸ್ತರಣೆ

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ

RDPR ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನ; ವೇತನ, ಅರ್ಜಿ ಸಲ್ಲಿಕೆ ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

SCROLL FOR NEXT