ದೇಶ

ಸಾಲ ಮನ್ನಾ ಕುರಿತು ವಿವಾದಾತ್ಮಕ ಹೇಳಿಕೆ: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ನಾಯ್ಡು

ರೈತರ ಸಾಲ ಮನ್ನಾ ಮಾಡುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ ಎಂಬ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಕಾರಣಕ್ಕೆ ಕಾರಣರಾಗಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ...

ನವದೆಹಲಿ: ರೈತರ ಸಾಲ ಮನ್ನಾ ಮಾಡುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ ಎಂಬ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಕಾರಣಕ್ಕೆ ಕಾರಣರಾಗಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಹೇಳಿದ್ದು ಆ ಅರ್ಥದಲ್ಲಿ ಅಲ್ಲ. ಕೆಲ ರಾಜಕೀಯ ಪಕ್ಷಗಳು ದೀರ್ಘಕಾಲಿಕವಾಗಿ ಅಲ್ಲದೆ, ಕೇವಲ ಕ್ಷಣಿಕ ಸಮಸ್ಯೆಗಳನ್ನು ನಿವಾರಿಸೊಳ್ಳುವ ಸಲುವಾಗಿ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿವೆ ಎಂಬ ಅರ್ಥದಲ್ಲಿ ಹೇಳಿದ್ದೆ ಎಂದು ಹೇಳಿದ್ದಾರೆ. 
ನನ್ನ ಹೇಳಿಕೆ ರಾಜಕೀಯ ಪಕ್ಷಗಳನ್ನು ಉದ್ದೇಶಿಸಿ ನೀಡಿದ ಹೇಳಿಕೆಯಾಗಿತ್ತು. ಅಲ್ಪಾವಧಿ ವಿಧಾನಗಳು, ನಿರ್ಧಾರಗಳನ್ನು ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ. ಅಳುವ ಮಕ್ಕಳಿಗೆ ಅಳುವುದನ್ನು ನಿಲ್ಲಿಸುವ ಸಲುವಾಗಿ ಲಾಲಿಪಾಪ್ ನೀಡಿದಂತಾಗಿ ಹೋಗಿದೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. 
ಸರ್ಕಾರಗಳು ಮೂಲಭೂತ ಸೌಕರ್ಯ, ರೈತರ ಸಮಸ್ಯೆಗಳಾಗಿರುವ ಗೋದಾಮು, ಸಂಗ್ರಹಣೆ, ಕೃಷಿ ಗ್ರಾಮೀಣಕ್ಕೆ ರೆಫ್ರಿಜರೇಟರ್ ವ್ಯಾನ್ ಗಳಿ ಹೀಗೆ ನಾನಾ ರೀತಿಯ ಸಮಸ್ಯೆಗಳ ಕಡೆ ಗಮನ ಹರಿಸಬೇಕು. ಮೂಲಭೂತ ಸೌಕರ್ಯ ಹಾಗೂ ರೈತರ ಸಮಸ್ಯೆಗಳ ಕುರಿತಂತೆ ರಾಜಕೀ ಪಕ್ಷಗಳನ್ನುದ್ದೇಶಿಯಷ್ಟೇ ಹೇಳಿಕೆ ನೀಡಿದ್ದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT