ದೇಶ

ಸಾಲ ಮನ್ನಾ ಕುರಿತು ವಿವಾದಾತ್ಮಕ ಹೇಳಿಕೆ: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ನಾಯ್ಡು

ರೈತರ ಸಾಲ ಮನ್ನಾ ಮಾಡುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ ಎಂಬ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಕಾರಣಕ್ಕೆ ಕಾರಣರಾಗಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ...

ನವದೆಹಲಿ: ರೈತರ ಸಾಲ ಮನ್ನಾ ಮಾಡುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ ಎಂಬ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಕಾರಣಕ್ಕೆ ಕಾರಣರಾಗಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಹೇಳಿದ್ದು ಆ ಅರ್ಥದಲ್ಲಿ ಅಲ್ಲ. ಕೆಲ ರಾಜಕೀಯ ಪಕ್ಷಗಳು ದೀರ್ಘಕಾಲಿಕವಾಗಿ ಅಲ್ಲದೆ, ಕೇವಲ ಕ್ಷಣಿಕ ಸಮಸ್ಯೆಗಳನ್ನು ನಿವಾರಿಸೊಳ್ಳುವ ಸಲುವಾಗಿ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿವೆ ಎಂಬ ಅರ್ಥದಲ್ಲಿ ಹೇಳಿದ್ದೆ ಎಂದು ಹೇಳಿದ್ದಾರೆ. 
ನನ್ನ ಹೇಳಿಕೆ ರಾಜಕೀಯ ಪಕ್ಷಗಳನ್ನು ಉದ್ದೇಶಿಸಿ ನೀಡಿದ ಹೇಳಿಕೆಯಾಗಿತ್ತು. ಅಲ್ಪಾವಧಿ ವಿಧಾನಗಳು, ನಿರ್ಧಾರಗಳನ್ನು ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿ ಹೋಗಿದೆ. ಅಳುವ ಮಕ್ಕಳಿಗೆ ಅಳುವುದನ್ನು ನಿಲ್ಲಿಸುವ ಸಲುವಾಗಿ ಲಾಲಿಪಾಪ್ ನೀಡಿದಂತಾಗಿ ಹೋಗಿದೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. 
ಸರ್ಕಾರಗಳು ಮೂಲಭೂತ ಸೌಕರ್ಯ, ರೈತರ ಸಮಸ್ಯೆಗಳಾಗಿರುವ ಗೋದಾಮು, ಸಂಗ್ರಹಣೆ, ಕೃಷಿ ಗ್ರಾಮೀಣಕ್ಕೆ ರೆಫ್ರಿಜರೇಟರ್ ವ್ಯಾನ್ ಗಳಿ ಹೀಗೆ ನಾನಾ ರೀತಿಯ ಸಮಸ್ಯೆಗಳ ಕಡೆ ಗಮನ ಹರಿಸಬೇಕು. ಮೂಲಭೂತ ಸೌಕರ್ಯ ಹಾಗೂ ರೈತರ ಸಮಸ್ಯೆಗಳ ಕುರಿತಂತೆ ರಾಜಕೀ ಪಕ್ಷಗಳನ್ನುದ್ದೇಶಿಯಷ್ಟೇ ಹೇಳಿಕೆ ನೀಡಿದ್ದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT