ರಾಮ್ ನಾಥ್ ಕೋವಿಂದ್ 
ದೇಶ

ಬೆಂಬಲ ಕೋರಿ ನಾಳೆಯಿಂದ ರಾಷ್ಟ್ರ ಪ್ರವಾಸಕ್ಕೆ ಸಜ್ಜಾದ ಕೋವಿಂದ್

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ನಾಳೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲ ಕೋರಲಿದ್ದಾರೆ.

ಲಖನೌ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ನಾಳೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲ ಕೋರಲಿದ್ದಾರೆ. ಜುಲೈ ೧೭ ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬೆಂಬಲ ಕೋರಿ ಕೋವಿಂದ್ ರಾಷ್ಟ್ರದಾದ್ಯಂತ ಪ್ರವಾಸ ನಡೆಸಲಿದ್ದಾರೆ. 
ರಾಷ್ಟ್ರಪತಿ ಚುನಾವಣೆಯಲ್ಲಿ ಉತ್ತರ ಪ್ರದೇಶದ ಶಾಸಕರ ಮತದ ಮೌಲ್ಯ ಅತಿ ಹೆಚ್ಚಿದೆ. ಈ ಚುನಾವಣೆಯಲ್ಲಿ ಮತ ಹಾಕಲು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಕೂಡ ಅರ್ಹರಾಗಿರುತ್ತಾರೆ. 
"ರಾಷ್ಟ್ರಪತಿ ಚುನಾವಣೆಯ ಮತದಾನ ಪಾರದರ್ಶಕವಾಗಿ ಮತ್ತು ಸಮಸ್ಯೆಯಿಲ್ಲದೆ ಜರುಗಲು ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ"ಎಂದು ಉತ್ತರ ಪ್ರದೇಶದ ವಿಧಾನಸಭೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಕಳೆದ ಸಂಜೆ ವಿಧಾನಸಭಾ ಅಧಿಕಾರಿಗಳೊಂದಿಗೆ ಸಿದ್ಧತೆ ಬಗ್ಗೆ ಮಾತುಕತೆ ನಡೆಸಿರುವುದಾಗಿ ಚುನಾವಣಾ ಆಯೋಗದ ಅಧಿಕಾರಿ ಹೇಳಿದ್ದಾರೆ. 
ಉತ್ತರಪ್ರದೇಶ ಪ್ರವಾಸದ ನಂತರ ಕೋವಿಂದ್ ಉತ್ತರಾಖಂಡಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಕೋವಿಂದ್ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯ ಮೂಲದವರು. 
ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮೀರಾ ಕುಮಾರಿ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT