ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

34 ಸಾವಿರ ಕೋಟಿ ರೂ. ಕೃಷಿ ಸಾಲ ಮನ್ನಾ: ಮಹಾರಾಷ್ಟ್ರ ಮುಖ್ಯಮಂತ್ರಿ ಘೋಷಣೆ

ಮಹಾರಾಷ್ಟ್ರ ರಾಜ್ಯ ಸರ್ಕಾರ ರೈತರಿಗೆ ಅತಿದೊಡ್ಡ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 34,000 ಕೋಟಿ...

ಮುಂಬೈ: ಮಹಾರಾಷ್ಟ್ರ ರಾಜ್ಯ ಸರ್ಕಾರ ರೈತರಿಗೆ ಅತಿದೊಡ್ಡ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 34,000 ಕೋಟಿ ರೂಪಾಯಿಗಳಷ್ಟು ಕೃಷಿ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ರೈತರಿಗೆ 1.5 ಲಕ್ಷದವರೆಗೆ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇದರಿಂದ ರಾಜ್ಯದ 89 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ.
ತಮ್ಮ ಸಾಲವನ್ನು ನಿಗದಿತ ಸಮಯದೊಳಗೆ ಸರಿಯಾಗಿ ಪಾವತಿಸಿಕೊಂಡು ಬಂದ ರೈತರ ಸಾಲದಲ್ಲಿ ಶೇಕಡಾ 25ರಷ್ಟನ್ನು ರಾಜ್ಯ ಸರ್ಕಾರ ಮನ್ನಾ ಮಾಡಲಿದೆ ಎಂದು ಹೇಳಿದರು.
ರೈತರ ಕೃಷಿ ಸಾಲ ಮನ್ನಾ ಮಾಡುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುವುದರಿಂದ ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ನೀಡುವಂತೆ ಸೂಚಿಸಲಾಗಿದೆ ಎಂದರು.
ರೈತರ ಸಾಲ ಮನ್ನಾ ಮಾಡುವ ರಾಜ್ಯ ಮಹಾರಾಷ್ಟ್ರ ಮೊದಲೇನಲ್ಲ. ಈ ಹಿಂದೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, 5 ಎಕರೆಗಿಂತಲೂ ಕಡಿಮೆ ಭೂಮಿ ಹೊಂದಿದ ಸಣ್ಣ ಮತ್ತು ಅತಿಸಣ್ಣ ರೈತರ ಬೆಳೆ ಸಾಲವನ್ನು 2 ಲಕ್ಷದವರೆಗೆ ಮನ್ನಾ ಮಾಡುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT