ಶ್ರೀನಗರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸುತ್ತಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆಸಿದೆ.
ನಿನ್ನೆಯಷ್ಟೇ ಪಾಂಥಾಕೋಕ್ ಪ್ರದೇಶ ಸಿಆರ್'ಪಿಎಫ್ ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ನಂತರ ಸ್ಥಳದಿಂದ ಕಾಲ್ಕಿತ್ತಿದ್ದ ಉಗ್ರರು ಶ್ರೀನಗರದ ದೆಹಲಿ ಪಬ್ಲಿಕ್ ಶಾಲೆಯಲ್ಲಿ ತಲೆಮರೆಸಿಕೊಂಡಿದ್ದರು. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ 3.40ರ ಸುಮಾರಿಗೆ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಇಬ್ಬರು ಯೋಧರು ಗಾಯಗೊಂಡಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.