ಅಹಮದಾಬಾದ್: ಜಗನ್ನಾಥ ದೇಗುಲಕ್ಕೆ ಅಮಿತ್ ಶಾ ಭೇಟಿ, ಮಂಗಳ ಆರತಿಯಲ್ಲಿ ಭಾಗಿ 
ದೇಶ

ಅಹಮದಾಬಾದ್: ಜಗನ್ನಾಥ ದೇಗುಲಕ್ಕೆ ಅಮಿತ್ ಶಾ ಭೇಟಿ, ಮಂಗಳ ಆರತಿಯಲ್ಲಿ ಭಾಗಿ

ಅಹಮದಾಬಾದ್'ಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಶ್ರೀ ಜಗನ್ನಾಥ ದೇಗುಲಕ್ಕೆ ಭೇಟಿ ನೀಡಿದ್ದು, ಮಂಗಳ ಆರತಿಯಲ್ಲಿ ಭಾಗಿಯಾಗಿದ್ದಾರೆ...

ಅಹಮದಾಬಾದ್: ಅಹಮದಾಬಾದ್'ಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಶ್ರೀ ಜಗನ್ನಾಥ ದೇಗುಲಕ್ಕೆ ಭೇಟಿ ನೀಡಿದ್ದು, ಮಂಗಳ ಆರತಿಯಲ್ಲಿ ಭಾಗಿಯಾಗಿದ್ದಾರೆ. 
ಇಂದು ಬೆಳಿಗ್ಗೆ ಅಹಮದಾಬಾದ್ ಗೆ ತೆರಳಿದ ಅಮಿತ್ ಶಾ ಅವರು ದೇಗುಲಕ್ಕೆ ಭೇಟಿ ನೀಡಿ ಜಗನ್ನಾಥನಿಗೆ ಸಲ್ಲಿಸಲಾಗುವ ಮಂಗಳ ಆರತಿಯಲ್ಲಿ ಭಾಗಿಯಾದರು. 
ಜಗದ್ವಿಖ್ಯಾತ ಪುರಿಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರಾ ದೇವಿಯರ ರಥೆ ಯಾತ್ರೆಯನ್ನು ನಡೆಸಲಾಗುತ್ತಿದೆ.  
ದೈವದೂತ ಕೃಷ್ಣ ತನ್ನ ಸಹೋದರ ಬಲಭದ್ರ ಹಾಗೂ ಸಹೋದರಿ ಸುಭದ್ರ ಅವರೊಂದಿಗೆ ವೃಂದಾವನಕ್ಕೆ ಹಿಂತಿರುಗಿ ಬರುವನೆಂಬ ನಂಬಿಕೆಯೊಂದಿಗೆ ಈ ಜಾತ್ರೆಯನ್ನು ಹಲವು ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಆ ಸಂಪ್ರದಾಯಕ್ಕೆ 5 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. 
ರಥ ಯಾತ್ರೆಯ ಭಾಗವಾಗಿ ಜಗನ್ನಾಥ, ಬಾಲಭದ್ರ ಹಾಗೂ ಸುಭದ್ರರ ಉತ್ಸವ ಮೂರ್ತಿಗಳನ್ನು ದೇವಾಲಯಗಳ ಆಕಾರದಲ್ಲಿ ನಿರ್ಮಿಸಿ ಸಿಂಗರಿಸಲಾದ ಮೂರು ರಥಗಳಲ್ಲಿ ಮೆರವಣಿಗೆ ಮಾಡುತ್ತ ಗುಂಡಿಚಾ ಮಂದಿರಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನಂತರ ಅಲ್ಲಿ 9 ದಿನಗಳ ಕಾಲ ತಂಗಿ ಮತ್ತೆ ಮುಖ್ಯ ದೇವಾಲಯಕ್ಕೆ ಮರಳಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!