ಸಂಗ್ರಹ ಚಿತ್ರ 
ದೇಶ

ರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮೀರಾಕುಮಾರ್​ಗೆ ಜೆಡಿಎಸ್​ ಬೆಂಬಲ!

ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡ ಗುಲಾಂನಬಿ ಅಜಾದ್ ಅವರು ಎಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಹಿನ್ನಲೆಯಲ್ಲಿ ಜೆಡಿಎಸ್​ ವರಿಷ್ಠ  ಎಚ್​.ಡಿ.ದೇವೇಗೌಡ ಬೆಂಬಲ ಸೂಚಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮೀರಾಕುಮಾರ್​ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಕುಪೇಂದ್ರ ರೆಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ ಹಲವು ಸಂಸದ ಹಾಗೂ ಶಾಸಕರು ಮೀರಾ ಕುಮಾರ್ ಅವರಿಗೆ ಬೆಂಬಲಿಸಿ ಸಹಿ ಹಾಕಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, "ಮೀರಾ ಕುಮಾರ್​ ಅವರಿಗೆ ಬೆಂಬಲ ನೀಡುವಂತೆ ದೇವೇಗೌಡ ಅವರು ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಮೀರಾ ಕುಮಾರ್​ ಅವರಿಗೆ  ಬೆಂಬಲಿಸುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್​ ದೇವೇಗೌಡ ಅವರೊಂದಿಗೆ ದೂರವಾಣಿಯಲ್ಲಿ ಮನವಿ ಮಾಡಿದ್ದರು" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT