ದೇಶದಾದ್ಯಂತ ಈದ್ ಸಂಭ್ರಮ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ದೇಶದಾದ್ಯಂತ ಈದ್ ಸಂಭ್ರಮ: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ

ದೇಶದಾದ್ಯಂತ ಈದ್-ಉಲ್-ಫಿತರ್ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಮುಸ್ಲಿಂ ಬಾಂಧವರಿಗೆ ಸೋಮವಾರ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ: ದೇಶದಾದ್ಯಂತ ಈದ್-ಉಲ್-ಫಿತರ್ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಮುಸ್ಲಿಂ ಬಾಂಧವರಿಗೆ ಸೋಮವಾರ ಶುಭಾಶಯಗಳನ್ನು ಕೋರಿದ್ದಾರೆ. 
ವೈವಿಧ್ಯತೆ ಭಾರತದ ವಿಶೇಷ, ಇಂದು ದೇಶದಾದ್ಯಂತ ಈದ್ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಎಲ್ಲಾ ಮುಸ್ಲಿಂ ಸಹೋದರರು, ಸಹೋದರಿಯರು, ಭಾರತೀಯರು ಹಾಗೂ ವಿದೇಶದಲ್ಲಿರುವವರಿಗೆಲ್ಲರಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ. 
ರಂಜಾನ್ ಅತ್ಯಂತ ಪವಿತ್ರತೆಯುಳ್ಳ ತಿಂಗಳಾಗಿದ್ದು, ಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ. ಇದೀಗ ಈದ್ ಆಚರಣೆಯ ಸಮಯ. ಈದ್-ಉಲ್-ಫಿತರ್ ಆಚರಣೆ ಹಿನ್ನಲೆಯಲ್ಲಿ ದೇಶದ ಪ್ರತೀಯೊಬ್ಬ ನಾಗರಿಕನಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಇದರಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಕೂಡ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ ಶುಭಾಶಯಗಳನ್ನು ಕೋರಿದ್ದಾರೆ. 
ಈದ್ ಆಚರಣೆ ವಿಶ್ವಕ್ಕೆ ಸಂತೋಷ ಮತ್ತು ಶಾಂತಿಯ ಸಂದೇಶವನ್ನು ಈ ವಿಶೇಷ ದಿನದಂದು ಸಾರುತ್ತದೆ. ಪರಸ್ಪರ ಸೋದರತ್ವದ ಶಕ್ತಿ, ಸಾಮಾಜಿಕ ಏಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT