ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರ ಆರೋಪ: ಯೋಗಿ ಆದಿತ್ಯನಾಥ್ ಆರಂಭಿಸಿದ್ದ ಹಿಂದೂ ಯುವ ವಾಹಿನಿಯ 3 ಕಾರ್ಯಕರ್ತರ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರಂಭಿಸಿದ್ದ ಹಿಂದೂ ಯುವ ವಾಹಿನಿ(ಎಚ್ ವೈ ವಿ) ಸಂಘಟನೆಯ ಮೂವರು....

ಬರೇಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರಂಭಿಸಿದ್ದ ಹಿಂದೂ ಯುವ ವಾಹಿನಿ(ಎಚ್ ವೈ ವಿ) ಸಂಘಟನೆಯ ಮೂವರು ಕಾರ್ಯಕರ್ತರನ್ನು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಾಗೂ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ.
ಗಣೇಶನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ ಅಬ್ಬರದ ಸಂಗೀತಕ್ಕೆ ಸಂಬಂಧಿಸಿದಂತೆ ಎಚ್ ವೈವಿ ಕಾರ್ಯಕರ್ತ ಅವಿನಾಶ್ ಹಾಗೂ ದೀಪಕ್ ಎಂಬುವವರ ನಡುವೆ ಜಗಳವಾಗಿದೆ. ಬಳಿಕ ಎಚ್ ವೈವಿ ಕಾರ್ಯಕರ್ತರಾಗಿರುವ ತನ್ನ ಸ್ನೇಹಿತರೊಂದಿಗೆ ದೀಪಕ್ ಮನೆಗೆ ನುಗ್ಗಿದ ಅವಿನಾಶ್ ಅಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಅವರು ಹೇಳಿದ್ದಾರೆ.
ನಂತರ ದೀಪಕ್ ಅವರು ತನ್ನ ಸಹೋದರ ಗೌರವ್ ಅವರೊಂದಿಗೆ ಅವಿನಾಶ್ ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. 
ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಗೆ ಆಗಮಿಸಿದ ಎಚ್ ವೈವಿ ಪ್ರಾದೇಶಿಕ ಅಧ್ಯಕ್ಷ ಜೀತೇಂದ್ರ ಶರ್ಮಾ ಮತ್ತು ನಗರ ಘಟಕದ ಅಧ್ಯಕ್ಷ ಪಂಕಜ್ ಹಾಗೂ ಇತರೆ ಹಲವು ಕಾರ್ಯಕರ್ತರು ಅವಿನಾಶ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಎಚ್ ವೈವಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಬಿಜೆಪಿ ನಗರ ಘಟಕದ ಮುಖ್ಯಸ್ಥ ಉಮೇಶ್ ಕಠಾರಿಯಾ ಅವರೊಂದಿಗೂ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಸಬ್ ಇನ್ಸ್ ಪೆಕ್ಟರ್ ಮಾಯಾಂಕ್ ಅರೋರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಎಚ್ ವೈ ವಿ ಕಾರ್ಯಕರ್ತರ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು, ಅರೋರ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಅವಿನಾಶ್, ಜೀತೇಂದ್ರ ಹಾಗೂ ಪಂಕಜ್ ವಿರುದ್ಧ ಒಂದು ಎಫ್ಐಆರ್ ದಾಖಲಿಸಿದರೆ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈ ಮೂವರು ಹಾಗೂ ಮತ್ತೊಬ್ಬ ಆರೋಪಿ ಅನಿಲ್ ಸಕ್ಷೆನಾ ವಿರುದ್ದು ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಸಜ್ವಾನ್ ಅವರು ತಿಳಿಸಿದ್ದಾರೆ,
ಪ್ರಕರಣ ಸಂಬಂಧ ಅವಿನಾಶ್, ಜೀತೇಂದ್ರ ಹಾಗೂ ಪಂಕಜ್ ನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT