ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರ ಆರೋಪ: ಯೋಗಿ ಆದಿತ್ಯನಾಥ್ ಆರಂಭಿಸಿದ್ದ ಹಿಂದೂ ಯುವ ವಾಹಿನಿಯ 3 ಕಾರ್ಯಕರ್ತರ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರಂಭಿಸಿದ್ದ ಹಿಂದೂ ಯುವ ವಾಹಿನಿ(ಎಚ್ ವೈ ವಿ) ಸಂಘಟನೆಯ ಮೂವರು....

ಬರೇಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರಂಭಿಸಿದ್ದ ಹಿಂದೂ ಯುವ ವಾಹಿನಿ(ಎಚ್ ವೈ ವಿ) ಸಂಘಟನೆಯ ಮೂವರು ಕಾರ್ಯಕರ್ತರನ್ನು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಾಗೂ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ.
ಗಣೇಶನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ ಅಬ್ಬರದ ಸಂಗೀತಕ್ಕೆ ಸಂಬಂಧಿಸಿದಂತೆ ಎಚ್ ವೈವಿ ಕಾರ್ಯಕರ್ತ ಅವಿನಾಶ್ ಹಾಗೂ ದೀಪಕ್ ಎಂಬುವವರ ನಡುವೆ ಜಗಳವಾಗಿದೆ. ಬಳಿಕ ಎಚ್ ವೈವಿ ಕಾರ್ಯಕರ್ತರಾಗಿರುವ ತನ್ನ ಸ್ನೇಹಿತರೊಂದಿಗೆ ದೀಪಕ್ ಮನೆಗೆ ನುಗ್ಗಿದ ಅವಿನಾಶ್ ಅಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಅವರು ಹೇಳಿದ್ದಾರೆ.
ನಂತರ ದೀಪಕ್ ಅವರು ತನ್ನ ಸಹೋದರ ಗೌರವ್ ಅವರೊಂದಿಗೆ ಅವಿನಾಶ್ ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. 
ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಗೆ ಆಗಮಿಸಿದ ಎಚ್ ವೈವಿ ಪ್ರಾದೇಶಿಕ ಅಧ್ಯಕ್ಷ ಜೀತೇಂದ್ರ ಶರ್ಮಾ ಮತ್ತು ನಗರ ಘಟಕದ ಅಧ್ಯಕ್ಷ ಪಂಕಜ್ ಹಾಗೂ ಇತರೆ ಹಲವು ಕಾರ್ಯಕರ್ತರು ಅವಿನಾಶ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಎಚ್ ವೈವಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಬಿಜೆಪಿ ನಗರ ಘಟಕದ ಮುಖ್ಯಸ್ಥ ಉಮೇಶ್ ಕಠಾರಿಯಾ ಅವರೊಂದಿಗೂ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಸಬ್ ಇನ್ಸ್ ಪೆಕ್ಟರ್ ಮಾಯಾಂಕ್ ಅರೋರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಎಚ್ ವೈ ವಿ ಕಾರ್ಯಕರ್ತರ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು, ಅರೋರ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಅವಿನಾಶ್, ಜೀತೇಂದ್ರ ಹಾಗೂ ಪಂಕಜ್ ವಿರುದ್ಧ ಒಂದು ಎಫ್ಐಆರ್ ದಾಖಲಿಸಿದರೆ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈ ಮೂವರು ಹಾಗೂ ಮತ್ತೊಬ್ಬ ಆರೋಪಿ ಅನಿಲ್ ಸಕ್ಷೆನಾ ವಿರುದ್ದು ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಸಜ್ವಾನ್ ಅವರು ತಿಳಿಸಿದ್ದಾರೆ,
ಪ್ರಕರಣ ಸಂಬಂಧ ಅವಿನಾಶ್, ಜೀತೇಂದ್ರ ಹಾಗೂ ಪಂಕಜ್ ನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT