ಗೋಹತ್ಯೆ ಶಂಕೆ: ಮುಸ್ಲಿಂ ವ್ಯಕ್ತಿ ಮೇಲೆ ದಾಳಿ, ಮನೆಗೆ ಬೆಂಕಿ! 
ದೇಶ

ಜಾರ್ಖಂಡ್: ಗೋಹತ್ಯೆ ಶಂಕೆ; ಮುಸ್ಲಿಂ ವ್ಯಕ್ತಿ ಮೇಲೆ ದಾಳಿ, ಮನೆಗೆ ಬೆಂಕಿ

ಗೋಹತ್ಯೆ ಮಾಡಿದ್ದಾನೆಂದು ಶಂಕಿಸಿ ಮುಸ್ಲಿಂ ವ್ಯಕ್ತಿ ಮೇಲೆ ದಾಳಿ ನಡೆಸಲಾಗಿದ್ದು, ಆತನ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಜಾರ್ಖಾಂಡ್ ನ ಗಿರಿದಿಹ್ ಜಿಲ್ಲೆಯ ಬೇರಿಯಾದಲ್ಲಿ ಮಂಗಳವಾರ...

ಗಿರಿದಿಹ್: ಗೋಹತ್ಯೆ ಮಾಡಿದ್ದಾನೆಂದು ಶಂಕಿಸಿ ಮುಸ್ಲಿಂ ವ್ಯಕ್ತಿ ಮೇಲೆ ದಾಳಿ ನಡೆಸಲಾಗಿದ್ದು, ಆತನ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಜಾರ್ಖಾಂಡ್ ನ ಗಿರಿದಿಹ್ ಜಿಲ್ಲೆಯ ಬೇರಿಯಾದಲ್ಲಿ ಮಂಗಳವಾರ ನಡೆದಿದೆ. 
ಉಸ್ಮಾನ್ ಅನ್ಸಾರಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಉಸ್ಮಾನ್ ಮನೆ ಮುಂದೆ ಸತ್ತ ಹಸುವೊಂದು ಪತ್ತೆಯಾದ ಹಿನ್ನಲೆಯಲ್ಲಿ ಹಸುವನ್ನು ಈತನೇ ಹತ್ಯೆ ಮಾಡಿದ್ದಾನೆಂದು ಶಂಕಿಸಿದ ಸ್ಥಳೀಯರು ಸಿಟ್ಟಿಗೆದ್ದು ಉಸ್ಮಾನ್ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ, ಆತನ ಮನೆಗೆ ಬೆಂಕಿ ಹಚ್ಚಿದ್ದಾರೆ. 
ಜನರು ಉಸ್ಮಾನ್ ಮೇಲೆ ದಾಳಿ ನಡೆಸಿದ ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ, ದಾಳಿಕೋರರಿಂದ ಉಸ್ಮಾನ್ ಹಾಗೂ ಆತನ ಕುಟುಂಬಸ್ಥರನ್ನು ರಕ್ಷಣೆ ಮಾಡಿ ಪರಿಸ್ಥಿತಿಯನ್ನು ತಿಳಿಸಿಗೊಳಿಸಿದ್ದಾರೆ. ಹಲ್ಲೆಗೊಳಗಾಗಿರುವ ಉಸ್ಮಾನ್ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಇನ್ನು ಘಟನೆಗೆ ಜಾರ್ಖಾಂಡ್ ನ ಹಲವೆಡೆ ವಿರೋಧ ವ್ಯಕ್ತವಾಗುತ್ತಿದ್ದು ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT