ಗೋಹತ್ಯೆ ಶಂಕೆ: ಮುಸ್ಲಿಂ ವ್ಯಕ್ತಿ ಮೇಲೆ ದಾಳಿ, ಮನೆಗೆ ಬೆಂಕಿ! 
ದೇಶ

ಜಾರ್ಖಂಡ್: ಗೋಹತ್ಯೆ ಶಂಕೆ; ಮುಸ್ಲಿಂ ವ್ಯಕ್ತಿ ಮೇಲೆ ದಾಳಿ, ಮನೆಗೆ ಬೆಂಕಿ

ಗೋಹತ್ಯೆ ಮಾಡಿದ್ದಾನೆಂದು ಶಂಕಿಸಿ ಮುಸ್ಲಿಂ ವ್ಯಕ್ತಿ ಮೇಲೆ ದಾಳಿ ನಡೆಸಲಾಗಿದ್ದು, ಆತನ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಜಾರ್ಖಾಂಡ್ ನ ಗಿರಿದಿಹ್ ಜಿಲ್ಲೆಯ ಬೇರಿಯಾದಲ್ಲಿ ಮಂಗಳವಾರ...

ಗಿರಿದಿಹ್: ಗೋಹತ್ಯೆ ಮಾಡಿದ್ದಾನೆಂದು ಶಂಕಿಸಿ ಮುಸ್ಲಿಂ ವ್ಯಕ್ತಿ ಮೇಲೆ ದಾಳಿ ನಡೆಸಲಾಗಿದ್ದು, ಆತನ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಜಾರ್ಖಾಂಡ್ ನ ಗಿರಿದಿಹ್ ಜಿಲ್ಲೆಯ ಬೇರಿಯಾದಲ್ಲಿ ಮಂಗಳವಾರ ನಡೆದಿದೆ. 
ಉಸ್ಮಾನ್ ಅನ್ಸಾರಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಉಸ್ಮಾನ್ ಮನೆ ಮುಂದೆ ಸತ್ತ ಹಸುವೊಂದು ಪತ್ತೆಯಾದ ಹಿನ್ನಲೆಯಲ್ಲಿ ಹಸುವನ್ನು ಈತನೇ ಹತ್ಯೆ ಮಾಡಿದ್ದಾನೆಂದು ಶಂಕಿಸಿದ ಸ್ಥಳೀಯರು ಸಿಟ್ಟಿಗೆದ್ದು ಉಸ್ಮಾನ್ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ, ಆತನ ಮನೆಗೆ ಬೆಂಕಿ ಹಚ್ಚಿದ್ದಾರೆ. 
ಜನರು ಉಸ್ಮಾನ್ ಮೇಲೆ ದಾಳಿ ನಡೆಸಿದ ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ, ದಾಳಿಕೋರರಿಂದ ಉಸ್ಮಾನ್ ಹಾಗೂ ಆತನ ಕುಟುಂಬಸ್ಥರನ್ನು ರಕ್ಷಣೆ ಮಾಡಿ ಪರಿಸ್ಥಿತಿಯನ್ನು ತಿಳಿಸಿಗೊಳಿಸಿದ್ದಾರೆ. ಹಲ್ಲೆಗೊಳಗಾಗಿರುವ ಉಸ್ಮಾನ್ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಇನ್ನು ಘಟನೆಗೆ ಜಾರ್ಖಾಂಡ್ ನ ಹಲವೆಡೆ ವಿರೋಧ ವ್ಯಕ್ತವಾಗುತ್ತಿದ್ದು ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT