ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ 
ದೇಶ

ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ, ತತ್ವಗಳ ಕದನವಾಗಿದೆ: ಸೋನಿಯಾ ಗಾಂಧಿ

ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ ಹಾಗೂ ತತ್ವಗಳ ಕದನವಾಗಿದ್ದು, ಹೋರಾಟಕ್ಕೆ ವಿರೋಧ ಪಕ್ಷಗಳು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಬುಧವಾರ...

ನವದೆಹಲಿ: ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ ಹಾಗೂ ತತ್ವಗಳ ಕದನವಾಗಿದ್ದು, ಹೋರಾಟಕ್ಕೆ ವಿರೋಧ ಪಕ್ಷಗಳು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಬುಧವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸೋನಿಯಾ ಗಾಂಧಿಯವರು, ಜುಲೈ.17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ, ಸತ್ಯ ಹಾಗೂ ತತ್ವಗಳ ಕದನವಾಗಿದ್ದು, ಹೋರಾಡಲು ವಿರೋಧ ಪಕ್ಷಗಳು ಸಿದ್ಧವಾಗಿವೆ ಎಂದು ಹೇಳಿದ್ದಾರೆ. 
ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ವಿಭಜನೆಯ ಸಿದ್ಧಾಂತಗಳ ವಿರುದ್ದ ಮೀರಾ ಕುಮಾರ್ ಅವರಿದ್ದು, ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ. ಮೀರಾ ಕುಮಾರ್ ರಂತಹ ವ್ಯಕ್ತಿ ನಮ್ಮ ಅಭ್ಯರ್ಥಿಯಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ. 
ರಾಷ್ಟ್ರಪತಿ ಚುನಾವಣೆ ಜುಲೈ.17ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಮೀರಾ ಕುಮಾರ್ ಅವರು ಇಂದು ಲೋಕಸಭಾ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದರು.  ಚುನಾವಣೆಯಲ್ಲಿ ಮೀರಾ ಕುಮಾರ್ ಮತ್ತು ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರ ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT