ಗುಜರಾತ್ ನಲ್ಲಿ ಪ್ರಧಾನಿ ಮೋದಿ ಭಾಷಣ 
ದೇಶ

ಗೋ ಭಕ್ತಿಯ ಹೆಸರಲ್ಲಿ ಮನುಷ್ಯರ ಹತ್ಯೆ ತಪ್ಪು: ಗೋ ರಕ್ಷಕರಿಗೆ ಪ್ರಧಾನಿ ಮೋದಿ ಎಚ್ಚರಿಕೆ

ಗೋ ರಕ್ಷಣೆಯ ಹೆಸರಿನಲ್ಲಿ ಹತ್ಯೆಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಾಂಧಿನಗರ್: ಗೋ ಭಕ್ತಿಯ ಹೆಸರಿನಲ್ಲಿ ಮನುಷ್ಯರ ಹತ್ಯೆಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಗೋರಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.  
ಗುಜರಾತ್ ನ ಸಬರ್ ಮತಿ ಆಶ್ರಮದ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳ ಬಗ್ಗೆ ಮೌನ ಮುರಿದಿದ್ದು, ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ, ಥಳಿತ ಹತ್ಯೆ ಪ್ರಕರಣಗಳ ಬಗ್ಗೆ ತಮಗೆ ಬೇಸರವಾಗಿದೆ ಎಂದು ಹೇಳಿದ್ದಾರೆ. 
ಈ ದೇಶದಲ್ಲಿ ಯಾರಿಗೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅಧಿಕಾರವಿಲ್ಲ. ಗೋರಕ್ಷಣೆ ಮಾಡಬೇಕಿದೆ, ಹಾಗೂ ಮಹಾತ್ಮಾ ಗಾಂಧಿ ಹಾಗೂ ಆಚಾರ್ಯರಷ್ಟು ಯಾರೂ ಗೋವಿನ ಸಂತತಿ ಉಳಿಸುವ ಬಗ್ಗೆ ಮಾತನಾಡಿಲ್ಲ. ಆದರೆ ಗೋ ರಕ್ಷಣೆಯ ಹೆಸರಿನಲ್ಲಿ ಹತ್ಯೆ ಮಾಡುವುದನ್ನು ಗಾಂಧಿ ಒಪ್ಪುತ್ತಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.  
ನಮ್ಮದು ಅಹಿಂಸೆಯ ನೆಲ, ನಮ್ಮದು ಮಹಾತ್ಮಾ ಗಾಂಧಿ ಅವರಿದ್ದ ಭೂಮಿ, ಅದನ್ನೇಕೆ ಮರೆಯುತ್ತಿದ್ದೇವೆ? ನಮ್ಮ ಸಮಾಜದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಹಿಂಸಾಚಾರದಿಂದ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಮೋದಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ. 
ಮಹಾತ್ಮಾ ಗಾಂಧಿ ಅವರ ಕನಸಿನ ರಾಷ್ಟ್ರವನ್ನು ನಿರ್ಮಾಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀದಿದ್ದು, ಒಗ್ಗಟ್ಟಿನಿಂದ ಮುನ್ನಡೆಯೋಣ, ಮಹಾತ್ಮಾ ಗಾಂಧಿ ಅವರ ಕನಸಿನ ಭಾರತವನ್ನು ಸೃಷ್ಟಿಸೋಣ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹೆಮ್ಮೆ ಪಡುವಂತಹ ಭಾರತವನ್ನು ನಿರ್ಮಿಸೋಣ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT