ರಾಹುಲ್ ಗಾಂಧಿ 
ದೇಶ

ಭಾರತವನ್ನು ಪಪ್ಪು ಮುಕ್ತ ಮಾಡುತ್ತೇನೆ: ಮೀರತ್ ನ ಮಾಜಿ ಕಾಂಗ್ರೆಸ್ ನಾಯಕನ ಪ್ರತಿಜ್ಞೆ

ವಾಟ್ಸ್ ಆಪ್ ಗ್ರೂಪ್ ನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಪ್ಪು ಎಂದು ಹಾಸ್ಯ ಮಾಡಿದ್ದ ಮೀರತ್ ನ ಕಾಂಗ್ರೆಸ್ ನ ಮಾಜಿ ಮುಖಂಡ ಈಗ ಭಾರತವನ್ನು ಪಪ್ಪು ಮುಕ್ತ ಮಾಡುತ್ತೇನೆ ಎಂದು ಪ್ರತಿಜ್ಞೆ....

ನವದೆಹಲಿ: ವಾಟ್ಸ್ ಆಪ್ ಗ್ರೂಪ್ ನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಪ್ಪು ಎಂದು ಹಾಸ್ಯ ಮಾಡಿದ್ದ ಮೀರತ್ ನ ಕಾಂಗ್ರೆಸ್ ನ ಮಾಜಿ ಮುಖಂಡ ಈಗ ಭಾರತವನ್ನು ಪಪ್ಪು ಮುಕ್ತ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ. 
ವಿನಯ್ ಪ್ರಧಾನ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಹೇಳುವ ಮೂಲಕ ಸುದ್ದಿಯಾಗಿದ್ದರು. ರಾಹುಲ್ ಗಾಂಧಿ ಅವರನ್ನು ಲೇವಡಿ ಮಾಡಿದ್ದಕ್ಕೆ ಕಾಂಗ್ರೆಸ್ ಪ್ರಧಾನ್ ಅವರನ್ನು ವಜಾಗೊಳಿಸಿತ್ತು. ಇದಾದ ಬಳಿಕ ಪ್ರಧಾನ್ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಂಡಿತ್ತು. ಈ ಬೆನ್ನಲ್ಲೇ ವಿನಯ್ ಪ್ರಧಾನ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್ ನಲ್ಲಿ ಮುಖಸ್ತುತಿ ರಾಜಕೀಯ ನಡೆಯುತ್ತಿದೆ. 
ಗಾಂಧಿ ಕುಟುಂಬದವರನ್ನು ಟೀಕಿಸುವುದು ದೈವ ನಿಂದಯ ರೀತಿ ಪರಿಗಣಿಸಲಾಗುತ್ತದೆ ಎಂದು ವಿನಯ್ ಪ್ರಧಾನ್ ಹೇಳಿದ್ದಾರೆ. "ನಾನು ಪಕ್ಷಕ್ಕಾಗಿ ಇಡಿ ಜೀವನವನ್ನೇ ಕಳೆದಿದ್ದೇನೆ. ನನ್ನ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೂ ಮುನ್ನ ಸ್ಪಷ್ಟನೆ ಕೇಳಬಹುದಿತ್ತು ಎಂದು ವಿನಯ್ ಪ್ರಧಾನ್ ಹೇಳಿದ್ದು, ಮೋದಿ ಅವರ ಮಹಾತ್ವಾಕಾಂಕ್ಷಿ ಕಾಂಗ್ರೆಸ್ ಮುಕ್ತ ಭಾರತ ಯೋಜನೆಯನ್ನು ರಾಹುಲ್ ಗಾಂಧಿ ಅವರೇ ಪೂರ್ಣಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT