ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಭಾರತದ ದೊಡ್ಡ ಕಪಟಿ ಪ್ರಧಾನಿ ಮೋದಿ: ಕಾಂಗ್ರೆಸ್

ಗೋ ಭಕ್ತಿಯ ಹೆಸರಲ್ಲಿ ಮನುಷ್ಯರ ಹತ್ಯೆ ತಪ್ಪು ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಯನ್ನು ತಿರಸ್ಕರಿಸಿರುವ ಕಾಂಗ್ರೆಸ್, ಭಾರತದ ದೊಡ್ಡ ಕಪಟಿ ಪ್ರಧಾನಿ ಮೋದಿ ಎಂದು...

ಮುಂಬೈ: ಗೋ ಭಕ್ತಿಯ ಹೆಸರಲ್ಲಿ ಮನುಷ್ಯರ ಹತ್ಯೆ ತಪ್ಪು ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಯನ್ನು ತಿರಸ್ಕರಿಸಿರುವ ಕಾಂಗ್ರೆಸ್, ಭಾರತದ ದೊಡ್ಡ ಕಪಟಿ ಪ್ರಧಾನಿ ಮೋದಿ ಎಂದು ಶುಕ್ರವಾರ ಹೇಳಿದೆ. 
ಮೋದಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಎನ್.ಎ.ಹ್ಯಾರಿಸ್, ಗೋಹತ್ಯೆ ವಿಚಾರಗಳ ಕುರಿತಂತೆ ಹೇಳಿಕೆ ನೀಡುವ ಬಹದಲು ಪ್ರಧಾನಮಂತ್ರಿಗಳು ಮೊದಲು ಸಮಾಜ ವಿರೋಧಿಗಳನ್ನು ಹಿಡಿದು ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ. 
ದೇಶದ ದೊಡ್ಡ ಕಪಟಿಯೇ ಪ್ರಧಾನಿ ಮೋದಿ. ಅವರು ಹೇಳುವುದೇ ಒಂದು, ಮಾಡುವುದೇ ಇನ್ನೊಂದು. ಮಾತನಾಡುವ ಬದಲು ಮೋದಿಯವರು ಗೋರಕ್ಷಕರನ್ನು ಹಿಡಿದು ಜೈಲಿಗೆ ಕಳುಹಿಸಬೇಕು. ಗೋರಕ್ಷಕರು ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಗೋವುಗಳನ್ನು ಯಾರು ಮಾರುತ್ತಿದ್ದಾರೆ, ಯಾರು ಕೊಳ್ಳುತ್ತಿದ್ದಾರೆ. ಇದನ್ನು ಕಂಡು ಹಿಡಿಯಲು ಸರ್ಕಾರ ಹೊಸ ನಿಯಮವನ್ನು ಜಾರಿಗೆ ತರಬೇಕಿದೆ. 
ಮೋದಿ ನಿಜಕ್ಕೂ ಗೋವುಗಳನ್ನು ಪ್ರೀತಿಸುವುದೇ ಆದರೆ, ಗೋವುಗಳ ರಫ್ತು ಮಾಡುವುದನ್ನು ನಿಲ್ಲಿಸಲಿ. ಏಕಕಾಲದಲ್ಲಿ ಗೋಹತ್ಯೆಯನ್ನು ನಿಷೇಧಿಸಲಿ. ಈ ವಿಚಾರ ಹಿಂದೂ ಮತ್ತು ಮುಸ್ಲಿಮರ ವಿಚಾರವಲ್ಲ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ್ದು. ಅದಕ್ಕೆ ನಾವು ಬೆಲೆ ಕೊಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐತಿಹಾಸಿಕ: ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ, ಹೊಸ ರಾಜಕೀಯ ಯುಗಕ್ಕೆ ಚಾಲನೆ

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಬಿಜೆಪಿ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು

ತಮಿಳುನಾಡಿನಲ್ಲಿ ರಾಜಕೀಯ, ಸಂವಿಧಾನಿಕ ಬಿಕ್ಕಟ್ಟು: ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹಿಂದಿನ ಸೂತ್ರಧಾರ ಯಾರು?

ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಐತಿಹಾಸಿಕ ಇತಿಹಾಸ

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು

SCROLL FOR NEXT