ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ 
ದೇಶ

ನೇತಾಜಿ ಮುಲಾಯಂಗೆ ನನ್ನ ಮೇಲೆ ಕೋಪವಿದೆ: ಅಖಿಲೇಶ್ ಯಾದವ್

ನನ್ನ ತಂದೆ ಮುಲಾಯಂ ಸಿಂಗ್ ಯಾದವ್ ಅವರಿಗೆ ನನ್ನ ಮೇಲೆ ಕೋಪವಿರುವುದು ನಿಜ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ...

ಇಟಾವಾ: ನನ್ನ ತಂದೆ ಮುಲಾಯಂ ಸಿಂಗ್ ಯಾದವ್ ಅವರಿಗೆ ನನ್ನ ಮೇಲೆ ಕೋಪವಿರುವುದು ನಿಜ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ. 
ಸಂಬಂಧಿ ರಾಮ್ ಗೋಪಾಲ್ ಯಾದವ್ ಅವರ 71 ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿರುವ ಅವರು, ರಾಮ್ ಗೋಪಾಲ್ ಅವರ ಮೇಲೆ ತಂದೆಯವರಿಗೆ ಯಾವುದೇ ರೀತಿಯ ಕೋಪವಿಲ್ಲ. ಆದರೆ, ಅವರಿಗೆ ನನ್ನ ಮೇಲೆ ಕೋಪವಿದೆ. ಹೀಗಾಗಿಯೇ ಅವರು ಇಂದಿನ ಕಾರ್ಯಕ್ರಮಕ್ಕೂ ಬಂದಿಲ್ಲ ಎಂದು ಹೇಳಿದ್ದಾರೆ. 
ಸಮಾಜವಾದಿ ಪಕ್ಷವನ್ನು ಮುಂದಕ್ಕೆ ತಲು ರಾಮ್ ಗೋಪಾಲ್ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಪಕ್ಷವನ್ನು ಹಾಗೂ ಪಕ್ಷದ ಚಿಹ್ನೆಯನ್ನು ಅವರು ರಕ್ಷಿಸಿದ್ದಾರೆ. ಅವರ ನಾಯಕತ್ವ ಹಾಗೂ ನಿರ್ದೇಶನದಿಂದಲೇ ಪಕ್ಷ ಅತೀ ದೊಡ್ಡ ಕೆಲಸಗಳನ್ನು ಹಾಗೂ ಅಭಿವೃದ್ಧಿ ಯೋಜನಾ ಕೆಲಸಗಳನ್ನು ಮಾಡಲು ಸಾಧ್ಯವಾಯಿತು. 
 ಆಗ್ರಾದಿಂದ ಲಖನೌವರೆಗೂ ಎಕ್ಸ್ ಪ್ರೆಸ್ ಮಾರ್ಗವನ್ನು 22 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗಿತ್ತು. ಇಷ್ಟೊಂದು ಕಡಿಮೆ ಸಮಯದಲ್ಲಿ ಯಾವುದೇ ಸರ್ಕಾರ ಇಷ್ಟು ದೊಡ್ಡ ಕೆಲಸ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT