ಸಂಸತ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ 
ದೇಶ

ಐತಿಹಾಸಿಕ ಸರಕು, ಸೇವಾ ತೆರಿಗೆ ಜಾರಿ: ಜಿಎಸ್ ಟಿ ಅಂದ್ರೆ ಗುಡ್ & ಸಿಂಪಲ್ ಟ್ಯಾಕ್ಸ್-ಮೋದಿ

ಜು.30 ರ ಮಧ್ಯರಾತ್ರಿ ನಡೆದ ಸಂಸತ್ ವಿಶೇಷ ಅಧಿವೇಶನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೊಂಡಿದೆ.

ನವದೆಹಲಿ: ಜು.30 ರ ಮಧ್ಯರಾತ್ರಿ ನಡೆದ ಸಂಸತ್ ವಿಶೇಷ ಅಧಿವೇಶನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೊಂಡಿದೆ. 
ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರಕು ಮತ್ತು ಸೇವಾ ತೆರಿಗೆಗೆ (ಜಿಎಸ್​ಟಿ) ಗೆ ಚಾಲನೆ ನೀಡಿದ್ದು, ಜಿಎಸ್ ಟಿ ಜಾರಿಯಾಗಿದೆ. 
ಜಿಎಸ್ ಟಿ ಗೆ ಚಾಲನೆ ನೀಡುವುದಕ್ಕೂ ಮುನ್ನ ಜಂಟಿ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜಿಎಸ್ ಟಿ ಯಾವುದೇ ಒಂದು ಸರ್ಕಾರ ಅಥವಾ ಪಕ್ಷದ ಸಾಧನೆಯಲ್ಲ, ಇದು ಎಲ್ಲರ ಒಗ್ಗಟ್ಟಿನ ಶ್ರಮದ ಫಲವಾಗಿದೆ. ಹಲವು ತಜ್ಞರ ಮಾರ್ಗದರ್ಶನದಲ್ಲಿ ಜಿಎಸ್ ಟಿ ರೂಪುಗೊಂಡಿರುವ ಜಿಎಸ್ ಟಿ ಜಾರಿಯ ಮೂಲಕ ಭಾರತಕ್ಕೆ ಆರ್ಥಿಕ ಸ್ವಾತಂತ್ರ್ಯ ದೊರೆತಿದೆ ಎಂದು ಹೇಳಿದ್ದಾರೆ. 
ಜಿಎಸ್ ಟಿ ಕೇವಲ ಅರ್ಥವ್ಯವಸ್ಥೆಯ ಕ್ರಾಂತಿಯಷ್ಟೇ ಅಲ್ಲದೇ ಲೋಕತಂತ್ರ ವ್ಯವಸ್ಥೆಯ ದೊಡ್ಡ ಕ್ರಾಂತಿಯೂ ಆಗಿದೆ. ಜಿಎಸ್ ಟಿ ಜಾರಿ ಮೂಲಕ ಭಾರತದ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದ್ದು, ಭಾರತ ಹೊಸ ದಿಕ್ಕಿನತ್ತ ಸಾಗಲಿದೆ. ಸ್ವಾತಂತ್ರ್ಯ ಬಂದಾಗ  ಸಂಸತ್ ನಲ್ಲಿ ಮಧ್ಯರಾತ್ರಿ ವಿಶೇಷ ಅಧಿವೇಶನ ನಡೆದಿತ್ತು, ಸ್ವಾತಂತ್ರ್ಯ ನಂತರ ವಲ್ಲಭ ಭಾಯ್ ಪಟೇಲ್ ಅವರು ದೇಶವನ್ನು ಒಗ್ಗೂಡಿಸಿದ್ದರು, ಈಗ ಜಿಎಸ್ ಟಿಯಿಂದ ಆರ್ಥಿಕ ಸ್ವಾತಂತ್ರ್ಯ ದೊರೆತಿದ್ದು, ಜಿಎಸ್ ಟಿ ಆರ್ಥಿಕ ಏಕೀಕರಣದ ಮಹತ್ವದ ಘಟ್ಟವಾಗಿದೆ ಎಂದಿದ್ದಾರೆ. 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಜಿಎಸ್ ಟಿಗೆ ಹೊಸ ವ್ಯಾಖ್ಯಾನ ನೀಡಿದ್ದು, ಕಾನೂನಿನ ಭಾಷೆಯಲ್ಲಿ ಜಿಎಸ್ ಟಿ ಅಂದ್ರೆ ಸರಕು ಮತ್ತು ಸೇವಾ ತೆರಿಗೆ ಎಂದು ಹೇಳಲಾಗುತ್ತದೆ. ಆದರೆ ಸರಳವಾಗಿ ಹೇಳಬೇಕೆಂದರೆ ಜಿಎಸ್ ಟಿ ಅಂದ್ರೆ ಗುಡ್ ಆಂಡ್ ಸಿಂಪಲ್ ಟ್ಯಾಕ್ಸ್ ಎಂದು ಹೇಳಿದ್ದಾರೆ. 
ಭಾಷಣದಲ್ಲಿ ಚಾಣಕ್ಯನನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ
ಯಾವುದೇ ವಸ್ತು ಎಷ್ಟೇ ದೂರದಲ್ಲಿರಲಿ, ಕಠಿಣ ಪರಿಶ್ರಮದಿಂದ ಪಡೆಯಬಹುದು ಎಂದು ಚಾಣಕ್ಯ ಹೇಳಿದ್ದಾರೆ. ಅಂತೆಯೇ ಜಿಎಸ್ ಟಿ ಹಲವು ವರ್ಷಗಳ ಪರಿಶ್ರಮದ ಫಲವಾಗಿದೆ ಎಂದು ಹೇಳುವ ಮೂಲಕ ಮೋದಿ ತಮ್ಮ ಭಾಷಣದಲ್ಲಿ ಚಾಣಕ್ಯನನ್ನು ಸ್ಮರಿಸಿದ್ದಾರೆ. 
ಸ್ವಾತಂತ್ರ್ಯ ಬಂದ ನಂತರ ಕೇವಲ 3 ಐತಿಹಾಸಿಕ ಘಟನೆಗಳಲ್ಲಿ ಮಧ್ಯರಾತ್ರಿ ಸಂಸತ್ ನಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಸ್ವಾತಂತ್ರ್ಯ ಬಂದಾಗ ಮೊದಲ ಬಾರಿ, ಸ್ವಾತಂತ್ರ್ಯೋತ್ಸವದ 25 ನೇ ವರ್ಷಾಚರಣೆ ಹಾಗೂ 50 ನೇ ವರ್ಷಾಚರಣೆ ವೇಳೆ ಸಂಸತ್ ನಲ್ಲಿ ಮಧ್ಯರಾತ್ರಿ ಕಾರ್ಯಕ್ರಮ ನಡೆಸಲಾಗಿತ್ತು. ಈಗ ಜಿಎಸ್ ಟಿ ಜಾರಿಗೆ ಮಧ್ಯರಾತ್ರಿ ಅಧಿವೇಶನ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT