ಗುರ್ಮೆಹರ್ ಕೌರ್ 
ದೇಶ

ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ; ಗುರ್ಮೆಹರ್ ಕೌರ್ ಸ್ಪಷ್ಟನೆ

ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಎತ್ತಿದ ವಿಷಯ ನನ್ನ ಕೈಮೀರಿ ಹೋಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಇಚ್ಛೆ ನನಗಿಲ್ಲ ಎಂಬುದನ್ನು ನಾನು ಮೊದಲು ಸ್ಪಷ್ಟಪಡಿಸುವೆ. ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ ಅಷ್ಟೆ. ಆದರೆ, ಈ ವಿಷಯ ಇಷ್ಟೊಂದು ದೊಡ್ಡ ತಿರುವು ಪಡೆಯುತ್ತದೆ ಎಂದು ಯೋಚಿಸಿಯೇ ಇರಲಿಲ್ಲ. ನನಗಿದು ನಿಜಕ್ಕೂ ಕೆಟ್ಟ ಸಮಯ, ಈ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ನಾನಿಲ್ಲ. ಇನ್ನು ಮುಂದೆ ಈ ವಿಷಯವನ್ನು ಮಾತನಾಡಲಾರೆ ಎಂದು ಹೇಳಿದ್ದಾರೆ. 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿವಾದಿತ ವಿದ್ಯಾರ್ಥಿಯೊಬ್ಬರು ರಾಮಜಾಸ್ ಕಾಲೇಜಿನ ಸೆಮಿನಾರ್ ವೊಂದರಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳು ಕಾಲೇಜಿನ ಸೆಮಿನಾರ್ ರನ್ನು ಬಲವಂತವಾಗಿ ರದ್ದುಪಡಿಸಿದ್ದರು. ಆ ಬಳಿಕ ಕಾಲೇಜು ಕ್ಯಾಂಪಸ್ ನಲ್ಲಿ ವಿವಾದ ತಲೆ ಎತ್ತಿತ್ತು. 
ತದನಂತರ ಗುರ್ಮೆಹರ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಎಬಿವಿಪಿ ವಿರುದ್ಧ ಅಭಿಯಾನ ನಡೆಸಿದ್ದರು. ಅಭಿಯಾನದ ಬಳಿಕ ಕೌರ್ ಗೆ ಜೀವ ಬೆದರಿಕೆ ಹಾಗೂ ಅತ್ಯಾಚಾರ ಬೆದರಿಕೆಗಳು ಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ