ಗುರ್ಮೆಹರ್ ಕೌರ್ 
ದೇಶ

ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ; ಗುರ್ಮೆಹರ್ ಕೌರ್ ಸ್ಪಷ್ಟನೆ

ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಎತ್ತಿದ ವಿಷಯ ನನ್ನ ಕೈಮೀರಿ ಹೋಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಇಚ್ಛೆ ನನಗಿಲ್ಲ ಎಂಬುದನ್ನು ನಾನು ಮೊದಲು ಸ್ಪಷ್ಟಪಡಿಸುವೆ. ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ ಅಷ್ಟೆ. ಆದರೆ, ಈ ವಿಷಯ ಇಷ್ಟೊಂದು ದೊಡ್ಡ ತಿರುವು ಪಡೆಯುತ್ತದೆ ಎಂದು ಯೋಚಿಸಿಯೇ ಇರಲಿಲ್ಲ. ನನಗಿದು ನಿಜಕ್ಕೂ ಕೆಟ್ಟ ಸಮಯ, ಈ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ನಾನಿಲ್ಲ. ಇನ್ನು ಮುಂದೆ ಈ ವಿಷಯವನ್ನು ಮಾತನಾಡಲಾರೆ ಎಂದು ಹೇಳಿದ್ದಾರೆ. 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿವಾದಿತ ವಿದ್ಯಾರ್ಥಿಯೊಬ್ಬರು ರಾಮಜಾಸ್ ಕಾಲೇಜಿನ ಸೆಮಿನಾರ್ ವೊಂದರಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳು ಕಾಲೇಜಿನ ಸೆಮಿನಾರ್ ರನ್ನು ಬಲವಂತವಾಗಿ ರದ್ದುಪಡಿಸಿದ್ದರು. ಆ ಬಳಿಕ ಕಾಲೇಜು ಕ್ಯಾಂಪಸ್ ನಲ್ಲಿ ವಿವಾದ ತಲೆ ಎತ್ತಿತ್ತು. 
ತದನಂತರ ಗುರ್ಮೆಹರ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಎಬಿವಿಪಿ ವಿರುದ್ಧ ಅಭಿಯಾನ ನಡೆಸಿದ್ದರು. ಅಭಿಯಾನದ ಬಳಿಕ ಕೌರ್ ಗೆ ಜೀವ ಬೆದರಿಕೆ ಹಾಗೂ ಅತ್ಯಾಚಾರ ಬೆದರಿಕೆಗಳು ಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT