ಗುರ್ಮೆಹರ್ ಕೌರ್ 
ದೇಶ

ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ; ಗುರ್ಮೆಹರ್ ಕೌರ್ ಸ್ಪಷ್ಟನೆ

ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಎತ್ತಿದ ವಿಷಯ ನನ್ನ ಕೈಮೀರಿ ಹೋಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಇಚ್ಛೆ ನನಗಿಲ್ಲ ಎಂಬುದನ್ನು ನಾನು ಮೊದಲು ಸ್ಪಷ್ಟಪಡಿಸುವೆ. ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ ಅಷ್ಟೆ. ಆದರೆ, ಈ ವಿಷಯ ಇಷ್ಟೊಂದು ದೊಡ್ಡ ತಿರುವು ಪಡೆಯುತ್ತದೆ ಎಂದು ಯೋಚಿಸಿಯೇ ಇರಲಿಲ್ಲ. ನನಗಿದು ನಿಜಕ್ಕೂ ಕೆಟ್ಟ ಸಮಯ, ಈ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ನಾನಿಲ್ಲ. ಇನ್ನು ಮುಂದೆ ಈ ವಿಷಯವನ್ನು ಮಾತನಾಡಲಾರೆ ಎಂದು ಹೇಳಿದ್ದಾರೆ. 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿವಾದಿತ ವಿದ್ಯಾರ್ಥಿಯೊಬ್ಬರು ರಾಮಜಾಸ್ ಕಾಲೇಜಿನ ಸೆಮಿನಾರ್ ವೊಂದರಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳು ಕಾಲೇಜಿನ ಸೆಮಿನಾರ್ ರನ್ನು ಬಲವಂತವಾಗಿ ರದ್ದುಪಡಿಸಿದ್ದರು. ಆ ಬಳಿಕ ಕಾಲೇಜು ಕ್ಯಾಂಪಸ್ ನಲ್ಲಿ ವಿವಾದ ತಲೆ ಎತ್ತಿತ್ತು. 
ತದನಂತರ ಗುರ್ಮೆಹರ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಎಬಿವಿಪಿ ವಿರುದ್ಧ ಅಭಿಯಾನ ನಡೆಸಿದ್ದರು. ಅಭಿಯಾನದ ಬಳಿಕ ಕೌರ್ ಗೆ ಜೀವ ಬೆದರಿಕೆ ಹಾಗೂ ಅತ್ಯಾಚಾರ ಬೆದರಿಕೆಗಳು ಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT