ಚುನಾವಣಾ ಆಯೋಗ 
ದೇಶ

ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟ: ಮಣಿಪುರ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲು

ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ...

ನವದೆಹಲಿ: ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ. 
ಪ್ರಮಾಣೀಕರಣ ಮಂಡಳಿಯಿಂದ ಅನುಮತಿ ಪಡೆಯದೆಯೇ ಬಿಜೆಪಿ ನಾಯಕರು ಸ್ಥಳೀಯ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೆ, ಜಾಹೀರಾತು ಪ್ರಕಟಿಸಿದ 8 ದಿನಪತ್ರಿಕೆಗಳ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಸಂಗೈ ಎಕ್ಸ್ ಪ್ರೆಸ್ ಮಣಿಪುರಿ, ಪೀಪರ್ ಕ್ರೋನಿಕಲ್, ನಹರೊಲ್ಗಿ, ಥೌಡಂಗ್, ಇಂಫಾಲ ಫ್ರೀ ಪ್ರೆಸ್, ಇಚೆಲ್ ಎಕ್ಸ್ ಪ್ರೆಸ್, ಯುಯೆನ್ ಲ್ಯಾನ್ಪೋ, ಪೊಕ್ನಫಮ್ ಎಂಬ ದಿನಪತ್ರಿಕೆಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆಂದು ಹೇಳಲಾಗುತ್ತಿದೆ. 
ಮಣಿಪುರದಲ್ಲಿ ಇಂದಿನಿಂದ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು, ಈ ನಡುವೆಯೇ ಬಿಜೆಪಿ ಕುರಿತಂತೆ ದಿನಪತ್ರಿಕೆಗಳಲ್ಲಿ ಜಾಹೀರಾತುಗಳು ಪ್ರಕಟಗೊಂಡಿರುವುದಕ್ಕೆ ಚುನಾವಣಾ ಆಯೋಗ ತೀವ್ರ ಕೆಂಡಾಮಂಡಲಗೊಂಡಿದೆ. 
ಚುನಾವಣೆ ಆರಂಭಗೊಳ್ಳುವ 48 ಗಂಟೆಗಳಿಗೂ ಮುನ್ನ ಜಾಹೀರಾತುಗಳನ್ನು ಪ್ರಕಟಿಸಲು ಯಾವುದೇ ಕಟ್ಟಳೆಗಳಿಲ್ಲ. ಆದರೆ, ಇಂತಹ ಸಮಯದಲ್ಲಿ ಜಾಹೀರಾತುಗಳನ್ನು ಪ್ರಕಟಿಸುವುದಕ್ಕೂ ಮುನ್ನ ಪ್ರಮಾಣೀಕೃತ ಸಮಿತಿಯಿಂದ ಅನುಮತಿ ಪಡೆಯಬೇಕು. ಆದರೆ, ಈ ಪ್ರಕರಣದಲ್ಲಿ ದಿನಪತ್ರಿಕೆಗಳು ಅನುಮತಿ ಪಡೆಯದೆಯೇ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT