ಚುನಾವಣಾ ಆಯೋಗ 
ದೇಶ

ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟ: ಮಣಿಪುರ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲು

ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ...

ನವದೆಹಲಿ: ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ. 
ಪ್ರಮಾಣೀಕರಣ ಮಂಡಳಿಯಿಂದ ಅನುಮತಿ ಪಡೆಯದೆಯೇ ಬಿಜೆಪಿ ನಾಯಕರು ಸ್ಥಳೀಯ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೆ, ಜಾಹೀರಾತು ಪ್ರಕಟಿಸಿದ 8 ದಿನಪತ್ರಿಕೆಗಳ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಸಂಗೈ ಎಕ್ಸ್ ಪ್ರೆಸ್ ಮಣಿಪುರಿ, ಪೀಪರ್ ಕ್ರೋನಿಕಲ್, ನಹರೊಲ್ಗಿ, ಥೌಡಂಗ್, ಇಂಫಾಲ ಫ್ರೀ ಪ್ರೆಸ್, ಇಚೆಲ್ ಎಕ್ಸ್ ಪ್ರೆಸ್, ಯುಯೆನ್ ಲ್ಯಾನ್ಪೋ, ಪೊಕ್ನಫಮ್ ಎಂಬ ದಿನಪತ್ರಿಕೆಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆಂದು ಹೇಳಲಾಗುತ್ತಿದೆ. 
ಮಣಿಪುರದಲ್ಲಿ ಇಂದಿನಿಂದ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು, ಈ ನಡುವೆಯೇ ಬಿಜೆಪಿ ಕುರಿತಂತೆ ದಿನಪತ್ರಿಕೆಗಳಲ್ಲಿ ಜಾಹೀರಾತುಗಳು ಪ್ರಕಟಗೊಂಡಿರುವುದಕ್ಕೆ ಚುನಾವಣಾ ಆಯೋಗ ತೀವ್ರ ಕೆಂಡಾಮಂಡಲಗೊಂಡಿದೆ. 
ಚುನಾವಣೆ ಆರಂಭಗೊಳ್ಳುವ 48 ಗಂಟೆಗಳಿಗೂ ಮುನ್ನ ಜಾಹೀರಾತುಗಳನ್ನು ಪ್ರಕಟಿಸಲು ಯಾವುದೇ ಕಟ್ಟಳೆಗಳಿಲ್ಲ. ಆದರೆ, ಇಂತಹ ಸಮಯದಲ್ಲಿ ಜಾಹೀರಾತುಗಳನ್ನು ಪ್ರಕಟಿಸುವುದಕ್ಕೂ ಮುನ್ನ ಪ್ರಮಾಣೀಕೃತ ಸಮಿತಿಯಿಂದ ಅನುಮತಿ ಪಡೆಯಬೇಕು. ಆದರೆ, ಈ ಪ್ರಕರಣದಲ್ಲಿ ದಿನಪತ್ರಿಕೆಗಳು ಅನುಮತಿ ಪಡೆಯದೆಯೇ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT