ದೇಶ

ಅಗಸ್ಟಾವೆಸ್ಟ್ ಲ್ಯಾಂಡ್ ಕೇಸ್: ಮತ್ತಿಬ್ಬರು ಆರೋಪಿಗಳಿಗೆ ಜಾಮೀನು

Lingaraj Badiger
ನವದೆಹಲಿ: ಅಗಸ್ಟಾವೆಸ್ಟ್ ಲ್ಯಾಂಡ್ ಬಹುಕೋಟಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳಿಗೆ ಶನಿವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮೀಡಿಯಾ ಎಕ್ಸಿಂ ಪ್ರೈ.ಲಿ.ನಿರ್ದೇಶಕ ಆರ್.ಕೆ.ನಂದಾ ಹಾಗೂ ಮಾಜಿ ನಿರ್ದೇಶಕ ಜೆ.ಬಿ.ಸುಬ್ರಣಮಣಿಯಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಒಂದು ಲಕ್ಷ ರುಪಾಯಿ ವೈಯಕ್ತಿ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.
ಈ ಮುಂಚೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಸಿಬಿಐ ಆರೋಪಿಗಳ ವಿರುದ್ಧ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ಪರಿಗಣಿಸಿದ್ದ ಕೋರ್ಟ್, ನಂದಾ ಹಾಗೂ ಸುಬ್ರಮಣಿಯಂ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಲಭ್ಯವಿವೆ ಎಂದು ಹೇಳಿತ್ತು.
SCROLL FOR NEXT