ದೇಶ

ಪ್ರಧಾನಿ ಮೋದಿ ನಂತರ ಕಾಶಿ ವಿಶ್ವನಾಥ ಮಂದಿರದಲ್ಲಿ ಅಖಿಲೇಶ್, ಡಿಂಪಲ್, ರಾಹುಲ್ ಪೂಜೆ!

Srinivas Rao BV
ವಾರಾಣಸಿ: ತಾವು ಪ್ರತಿನಿಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ವಿಶ್ವವಿಖ್ಯಾತ ವಿಶ್ವನಾಥ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಸಿದ ಬಳಿಕ ಈಗ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷದ ಮುಖಂಡರೂ ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್, ಡಿಂಪಲ್ ಯಾದವ್, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಕಾಶಿಯಲ್ಲಿರುವ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿ  ಪೂಜೆ ಸಲ್ಲಿಸಿದ್ದಾರೆ. 
ಸುಮಾರು 30 ನಿಮಿಷಗಳ ಕಾಲ ದೇವಾಲಯದಲ್ಲಿದ್ದ ಸಿಎಂ ಅಖಿಲೇಶ್ ಯಾದವ್ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ರೋಡ್ ಶೋ ನಡೆಸಿದ್ದಾರೆ. 
SCROLL FOR NEXT