ಅರುಣ್ ಜೇಟ್ಲಿ 
ದೇಶ

ನೋಟು ನಿಷೇಧ: ಜೇಟ್ಲಿ ಅವರನ್ನು ಸಂಪರ್ಕಿಸಿದ್ದರ ಬಗ್ಗೆ ಮಾಹಿತಿ ಸಾಧ್ಯವಿಲ್ಲ: ಹಣಕಾಸು ಸಚಿವಾಲಯ

ನೋಟು ನಿಷೇಧಕ್ಕೂ ಮುನ್ನ ಅರುಣ್ ಜೇಟ್ಲಿ ಅವರನ್ನು ಸಂಪರ್ಕಿಸಲಾಗಿತ್ತೇ ಎಂಬ ಆರ್ ಟಿಐ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಆ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ...

ನವದೆಹಲಿ: ನೋಟು ನಿಷೇಧಕ್ಕೂ ಮುನ್ನ ಅರುಣ್ ಜೇಟ್ಲಿ ಅವರನ್ನು ಸಂಪರ್ಕಿಸಲಾಗಿತ್ತೇ ಎಂಬ ಆರ್ ಟಿಐ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಆ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. 
ಅರುಣ್ ಜೇಟ್ಲಿ ಹಾಗೂ ಮುಖ್ಯ ಆರ್ಥಿಕ ಕಾರ್ಯದರ್ಶಿಗಳನ್ನು ನೋಟು ನಿಷೇಧಕ್ಕೂ ಮುನ್ನ ಸಂಪರ್ಕಿಸಿ, ಮಾಹಿತಿ ನೀಡಲಾಗಿತ್ತೇ ಎಂಬ ಆರ್ ಟಿಐ ಪ್ರಶ್ನೆಗೆ ಉತ್ತರಿಸುವುದು ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಈ ಹಿಂದೆ ಪ್ರಧಾನಿ ಕಾರ್ಯಾಲಯ ಹಾಗೂ ಆರ್ ಬಿಐ ಸ್ಪಷ್ಟಪಡಿಸಿತ್ತು. 
ಪಿಟಿಐ ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆರ್ ಟಿಐ ಪ್ರಶ್ನೆಯನ್ನು ಕೇಳಿತ್ತು. ಆದರೆ ಆರ್ ಟಿಐ ನ ಸೆಕ್ಷನ್ 8 (1) (a) ಅಡಿಯಲ್ಲಿ ಮಾಹಿತಿ ನೀಡಲು ನಿರಾಕರಿಸಿದೆ. ಭಾರತದ ಸಾರ್ವಭೌಮತ್ವ, ಭದ್ರತೆ, ಕಾರ್ಯತಂತ್ರ, ಆರ್ಥಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗಬಹುದಾದ ಮಾಹಿತಿಗಳನ್ನು ಸೆಕ್ಷನ್ 8(1) (a) ಅಡಿಯಲ್ಲಿ ನಿರಕಾರಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿಯನ್ನು ನಿರಾಕರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT