ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಜಿಎಸ್ ಟಿ ಸಭೆ 
ದೇಶ

ಕೊನೆಗೂ ಜಿಎಸ್ ಟಿ ಕರಡು ಮಸೂದೆಗೆ ಒಪ್ಪಿಗೆ: ಜುಲೈ 1ರಿಂದ ಅನುಷ್ಠಾನ ಸಾಧ್ಯತೆ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯನ್ನು ಜುಲೈ 1 ರಿಂದ ಜಾರಿಗೆ ತರುವ ಹಾದಿ ಸುಗಮವಾಗುತ್ತಿದೆ. ಮಾರ್ಚ್ 9 ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ...

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯನ್ನು ಜುಲೈ 1 ರಿಂದ ಜಾರಿಗೆ ತರುವ ಹಾದಿ ಸುಗಮವಾಗುತ್ತಿದೆ. ಮಾರ್ಚ್ 9 ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಸೂದೆಗೆ ಶಾಸನಾತ್ಮಕ ಒಪ್ಪಿಗೆ ಪಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಜಿಎಸ್ ಟಿ ಮಂಡಳಿಯ ಸಭೆ ಬಳಿಕ ಮಾತನಾಡಿದ ಅವರು ಕೇಂದ್ರದ ಜಿಎಸ್ ಟಿ ಮತ್ತು ಅಂತರ ರಾಜ್ಯ ವಹಿವಾಟಿಗೆ ಸಂಬಂಧಿಸಿದ ಸಮಗ್ರ ಕರಡು ಮಸೂದೆಗೆ ಜಿಎಸ್ ಟಿ ಮಂಡಳಿ ಒಪ್ಪಿಗೆ ನೀಡಿದೆ.  ಆದರೆ ರಾಜ್ಯಗಳಿಗೆ ಸಂಬಂಧಿಸಿದ ಯುಟಿ-ಜಿಎಸ್ ಟಿ ಮತ್ತು ಕೇಂದ್ರಾಡಳಿತ ಮಸೂದೆಗಳಿಗೆ ಮಾರ್ಚ್ 16 ರಂದು ನಡೆಯಲಿರುವ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಗರಿಷ್ಠ ಶೇ. 40 ರ ವರೆಗೂ ತೆರಿಗೆ ವಿಧಿಸಲು (ಶೇ.20 ರಷ್ಟು ಕೇಂದ್ರ ಮತ್ತು ಶೇ.20 ರಷ್ಟು ರಾಜ್ಯಗಳು) ಜಿಎಸ್ ಟಿ ಮಸೂದೆಯಲ್ಲಿ ಅವಕಾಶವಿದೆ. ಆದರೆ ತೆರಿಗೆ ದರವನ್ನು ಈ ಹಿಂದೆ ಮಂಜಳಿಯು ಒಪ್ಪಿಗೆ ನೀಡಿರುವ ಹಂತಗಳಲ್ಲಿಯೇ (ಶೇ.5, ಶೇ.12, ಶೇ.18 ಮತ್ತು ಶೇ. 28) ಇಡಲಾಗುವುದು ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT