ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಜಿಎಸ್ ಟಿ ಸಭೆ 
ದೇಶ

ಕೊನೆಗೂ ಜಿಎಸ್ ಟಿ ಕರಡು ಮಸೂದೆಗೆ ಒಪ್ಪಿಗೆ: ಜುಲೈ 1ರಿಂದ ಅನುಷ್ಠಾನ ಸಾಧ್ಯತೆ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯನ್ನು ಜುಲೈ 1 ರಿಂದ ಜಾರಿಗೆ ತರುವ ಹಾದಿ ಸುಗಮವಾಗುತ್ತಿದೆ. ಮಾರ್ಚ್ 9 ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ...

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯನ್ನು ಜುಲೈ 1 ರಿಂದ ಜಾರಿಗೆ ತರುವ ಹಾದಿ ಸುಗಮವಾಗುತ್ತಿದೆ. ಮಾರ್ಚ್ 9 ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಸೂದೆಗೆ ಶಾಸನಾತ್ಮಕ ಒಪ್ಪಿಗೆ ಪಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಜಿಎಸ್ ಟಿ ಮಂಡಳಿಯ ಸಭೆ ಬಳಿಕ ಮಾತನಾಡಿದ ಅವರು ಕೇಂದ್ರದ ಜಿಎಸ್ ಟಿ ಮತ್ತು ಅಂತರ ರಾಜ್ಯ ವಹಿವಾಟಿಗೆ ಸಂಬಂಧಿಸಿದ ಸಮಗ್ರ ಕರಡು ಮಸೂದೆಗೆ ಜಿಎಸ್ ಟಿ ಮಂಡಳಿ ಒಪ್ಪಿಗೆ ನೀಡಿದೆ.  ಆದರೆ ರಾಜ್ಯಗಳಿಗೆ ಸಂಬಂಧಿಸಿದ ಯುಟಿ-ಜಿಎಸ್ ಟಿ ಮತ್ತು ಕೇಂದ್ರಾಡಳಿತ ಮಸೂದೆಗಳಿಗೆ ಮಾರ್ಚ್ 16 ರಂದು ನಡೆಯಲಿರುವ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಗರಿಷ್ಠ ಶೇ. 40 ರ ವರೆಗೂ ತೆರಿಗೆ ವಿಧಿಸಲು (ಶೇ.20 ರಷ್ಟು ಕೇಂದ್ರ ಮತ್ತು ಶೇ.20 ರಷ್ಟು ರಾಜ್ಯಗಳು) ಜಿಎಸ್ ಟಿ ಮಸೂದೆಯಲ್ಲಿ ಅವಕಾಶವಿದೆ. ಆದರೆ ತೆರಿಗೆ ದರವನ್ನು ಈ ಹಿಂದೆ ಮಂಜಳಿಯು ಒಪ್ಪಿಗೆ ನೀಡಿರುವ ಹಂತಗಳಲ್ಲಿಯೇ (ಶೇ.5, ಶೇ.12, ಶೇ.18 ಮತ್ತು ಶೇ. 28) ಇಡಲಾಗುವುದು ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT