ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ 
ದೇಶ

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...

ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗಾಯತ್ರಿ ಪ್ರಜಾಪತಿಯವರ ಹೆಸರು ಕೇಳಿಬಂದಿದ್ದರೂ. ಈ ವರೆಗೂ ರಾಜ್ಯ ಸರ್ಕಾರ ಅವರನ್ನು ಬಂಧನಕ್ಕೊಳಪಡಿಸಿಲ್ಲ. ಮಾರ್ಚ್ 11 ರ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾವು ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆಂದು ಹೇಳಿದ್ದಾರೆ. 
ಪ್ರಜಾಪತಿಯವರನ್ನು ಅಖಿಲೇಶ್ ನೇತೃತ್ವದ ಸರ್ಕಾರ ರಕ್ಷಣೆ ಮಾಡುತ್ತಿದೆ. ಹೀಗಾಗಿಯೇ ಅವರನ್ನು ಈ ವರೆಗೂ ಬಂಧನಕ್ಕೊಳಪಡಿಸಿಲ್ಲ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT