ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ 
ದೇಶ

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...

ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗಾಯತ್ರಿ ಪ್ರಜಾಪತಿಯವರ ಹೆಸರು ಕೇಳಿಬಂದಿದ್ದರೂ. ಈ ವರೆಗೂ ರಾಜ್ಯ ಸರ್ಕಾರ ಅವರನ್ನು ಬಂಧನಕ್ಕೊಳಪಡಿಸಿಲ್ಲ. ಮಾರ್ಚ್ 11 ರ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾವು ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆಂದು ಹೇಳಿದ್ದಾರೆ. 
ಪ್ರಜಾಪತಿಯವರನ್ನು ಅಖಿಲೇಶ್ ನೇತೃತ್ವದ ಸರ್ಕಾರ ರಕ್ಷಣೆ ಮಾಡುತ್ತಿದೆ. ಹೀಗಾಗಿಯೇ ಅವರನ್ನು ಈ ವರೆಗೂ ಬಂಧನಕ್ಕೊಳಪಡಿಸಿಲ್ಲ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT