ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ 
ದೇಶ

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...

ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗಾಯತ್ರಿ ಪ್ರಜಾಪತಿಯವರ ಹೆಸರು ಕೇಳಿಬಂದಿದ್ದರೂ. ಈ ವರೆಗೂ ರಾಜ್ಯ ಸರ್ಕಾರ ಅವರನ್ನು ಬಂಧನಕ್ಕೊಳಪಡಿಸಿಲ್ಲ. ಮಾರ್ಚ್ 11 ರ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾವು ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆಂದು ಹೇಳಿದ್ದಾರೆ. 
ಪ್ರಜಾಪತಿಯವರನ್ನು ಅಖಿಲೇಶ್ ನೇತೃತ್ವದ ಸರ್ಕಾರ ರಕ್ಷಣೆ ಮಾಡುತ್ತಿದೆ. ಹೀಗಾಗಿಯೇ ಅವರನ್ನು ಈ ವರೆಗೂ ಬಂಧನಕ್ಕೊಳಪಡಿಸಿಲ್ಲ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ, ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೆಂಗಳೂರು- ಮುಂಬೈ ನಡುವಿನ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್

SCROLL FOR NEXT