ಸಂಗ್ರಹ ಚಿತ್ರ 
ದೇಶ

ತ್ರಾಲ್ ಎನ್ ಕೌಂಟರ್ ಅಂತ್ಯ: 2 ಉಗ್ರರನ್ನು ಸದೆಬಡಿದ ಸೇನೆ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್'ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್'ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಭಾನುವಾರ ತಿಳಿದುಬಂದಿದೆ. 
ದಕ್ಷಿಣ ಕಾಶ್ಮೀರದ ಪುಲ್ಮಾಮ ಜಿಲ್ಲೆಯ ತ್ರಾಲ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದರು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಉಗ್ರರ ಅಡಗಿಕುಳಿತಿರುವ ಬಗ್ಗೆ ಗುಪ್ತಚರ ಇಲಾಖೆ ಸೇನಾ ಪಡೆಗೆ ಮಾಹಿತಿ ನೀಡಿದೆ. ಕೂಡಲೇ ಸಿದ್ಧರಾದ ಯೋಧರು ಕಾರ್ಯಾಚರಣೆ ನಡೆಸಲು ಮುಂದಾಗಿದ್ದರು. ಸೇನಾ ಪಡೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಕೆಲ ಸ್ಥಳೀಯರು ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಸೃಷ್ಟಿಸಿದ್ದಾರೆ. ಸೇನಾ ಪಡೆಗಳ ಮೇಲೆ ಕೆಲವರು ಕಲ್ಲುತೂರಾಟವನ್ನು ನಡೆಸಿದ್ದಾರೆ. 
ನಂತರ ಸ್ಥಳದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಸ್ಥಳೀಯ ಅಧಿಕಾರಿಗಳು ಸೆಕ್ಷನ್ 147 ಜಾರಿ ಮಾಡಿದ್ದರು. ಇದರಂತೆ ನಿಷೇಧಿತ ಸ್ಥಳದಲ್ಲಿ ನಾಲ್ಕರಿಂದ ಹೆಚ್ಚು ಜನರು ಗುಂಪು ಕಟ್ಟಿಹೋಗದಂತೆ ಸೂಚನೆ ನೀಡಲಾಯಿತು. ಅಲ್ಲದೆ, ಕೆಲ ಸಮಯಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. 
ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಉಗ್ರರು ಎರಡೂ ಕಡೆಗಳಿಂದಲೂ ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಓರ್ವ ಪೇದೆ ಹುತಾತ್ಮನಾಗಿದ್ದು, ಓರ್ವ ಸಿಆರ್'ಪಿಎಫ್ ಯೋಧ ಗಂಭೀರವಾಗಿ ಗಾಯಗೊಂಡಿದ್ದಾನೆ. ನಂತರ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಯೋಧರು, ಉಗ್ರರು ಅಡಗಿ ಕುಳಿತಿದ್ದ ಮನೆಯನ್ನೇ ನೆಲಕ್ಕೆ ಉರುಳಿಸಿದರು. ಅಲ್ಲದೆ, ಮನೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರನ್ನು ಇದೇ ವೇಳೆ ಎನ್ ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 
ಮೂಲಗಳ ಪ್ರಕಾರ ಇದೀಗ ಹತ್ಯೆಯಾಗಿರುವ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ. ಇಬ್ಬರ ಪೈಕಿ ಓರ್ವ ಉಗ್ರ ಈ ಹಿಂದೆ ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಿ ಹತ್ಯೆ ಮಾಡಲಾಗಿದ್ದ ಉಗ್ರ ಬುರ್ಹಾನ್ ವಾನಿ ರೈಟ್ ಹ್ಯಾಂಡ್ ಸಬ್ಜರ್ ಭಟ್ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಉಗ್ರರನ್ನು ಅಕ್ವಿಬ್ ಎಂದು ಗುರ್ತಿಸಲಾಗಿದೆ. ಉಗ್ರರ ಮಟ್ಟ ಹಾಕಲು ಸೇನಾ ಪಡೆ ನಡೆಸುತ್ತಿದ್ದ ಕಾರ್ಯಾಚರಣೆ 
15 ಗಂಟೆಗಳ ಬಳಿಕ ಇದೀಗ ಅಂತ್ಯಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT