ಸಾಂದರ್ಭಿಕ ಚಿತ್ರ 
ದೇಶ

ಏನಿದು ಜಿಎಸ್ ಟಿ? ಇದರಿಂದ ಜನ ಸಾಮಾನ್ಯರ ಮೇಲಾಗುವ ಪರಿಣಾಮಗಳೇನು?

ಉತ್ಪಾದಕ ವಸ್ತುಗಳ ಎಲ್ಲ ತೆರಿಗೆಯನ್ನು ಒಂದೇ ವ್ಯವಸ್ಥೆಯಡಿ ತರುವ ತೆರಿಗೆ ಪದ್ಧತಿಗೆ ಸರಕು ಸೇವಾ ತೆರಿಗೆ ಎನ್ನಲಾಗುತ್ತದೆ. ಜಿಎಸ್ ಟಿ ಜಾರಿಯಾದರೆ....

ನವದೆಹಲಿ: ಹಲವು ಸುತ್ತಿನ ಮಾತುಕತೆಗಳ ನಂತರ ಕೊನೆಗೂ ಕೇಂದ್ರ ಸರಕು ಮತ್ತು ಸೇವಾ ತೆರಿಗೆ  ಮತ್ತು ಏಕೀಕೃತ ಸರಕು ಸೇವಾ ತೆರಿಗೆಗಳಿಗೆ ಜಿಎಸ್ ಟಿ ಮಂಡಳಿಯ ಒಪ್ಪಿಗೆ ದೊರೆತಿದೆ. ಈ ಮೂಲಕ ಭಾರತದ ಅತಿ ದೊಡ್ಡ ತೆರಿಗೆ ಸುಧಾರಣೆಯತ್ತ ಅಡಿಯಿಟ್ಟಂತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೇ 10 ವರ್ಷಗಳ ಕಾಯುವಿಕೆಯ ನಂತರ ದೇಶವೂ ಏಕರೂಪ ತೆರಿಗೆ ವ್ಯವಸ್ಥೆಗೆ ಸಾಕ್ಷಿಯಾಗಲಿದೆ.

ಉತ್ಪಾದಕ ವಸ್ತುಗಳ ಎಲ್ಲ ತೆರಿಗೆಯನ್ನು ಒಂದೇ ವ್ಯವಸ್ಥೆಯಡಿ ತರುವ ತೆರಿಗೆ ಪದ್ಧತಿಗೆ ಸರಕು ಸೇವಾ ತೆರಿಗೆ ಎನ್ನಲಾಗುತ್ತದೆ. ಜಿಎಸ್ ಟಿ ಜಾರಿಯಾದರೆ ವ್ಯಾಪಾರ ವಹಿವಾಟು ಇದರಿಂದ ದೇಶಾದ್ಯಂತ ಯಾವುದೇ ಅಡೆತಡೆಯಿಲ್ಲದೆ ವಹಿವಾಟು ನಡೆಸಬಹುದು. ವಹಿವಾಟು ವೆಚ್ಚ ಕೂಡ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಜಿಎಸ್ ಟಿ ಜಾರಿಯಾದರೆ ಸಂಕೀರ್ಣ ತೆರಿಗೆ ಪದ್ಧತಿ ಸರಳ ತೆರಿಗೆ ಪದ್ಧತಿಯಾಗುತ್ತದೆ. ಇನ್ನೊಂದೆಡೆ ಇದು ಆರ್ಥಿಕ ಅಭಿವೃದ್ಧಿ ದರ ಸುಧಾರಣೆಗೂ ನೆರವಾಗುತ್ತದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಜಿ ಎಸ್ ಟಿಯಲ್ಲಿ ಮೂರು ವಿಭಾಗಗಳಿದ್ದು, ಆ ಪೈಕಿ, ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಸಿಜಿಎಸ್ ಟಿ) ಒಂದು, ಪ್ರಸ್ತುತ ಇರುವ ಕೇಂದ್ರ ಅಬಕಾರಿ ತೆರಿಗೆ, ಕೇಂದ್ರ ಮಾರಾಟ ತೆರಿಗೆ, ಹೆಚ್ಚುವರಿ ಅಬಕಾರಿ ತೆರಿಗೆ, ಹೆಚ್ಚುವರಿ ಸೀಮಾ ಸುಂಕಗಳು ಸಿಜಿಎಸ್ ಟಿಯೊಂದಿಗೆ ಸೇರಿಕೊಳ್ಳುತ್ತವೆ. ಸಿಜಿಎಸ್ ಟಿ ಅನ್ವಯ ಸಂಗ್ರಹಿಸಲಾದ ಎಲ್ಲಾ ಆದಾಯವು ಕೇಂದ್ರಕ್ಕೆ ಸೇರುತ್ತದೆ. ಅಂದರೆ ಗ್ರಾಹಕ ಯಾವುದೇ ವಸ್ತುವನ್ನು ಖರೀದಿಸುವಾಗ ರಾಜ್ಯ ಹಾಗೂ ಕೇಂದ್ರಕ್ಕೆ ಪ್ರತ್ಯೇಕ ತೆರಿಗೆ ಪಾವತಿಸುವಂತಿಲ್ಲ, ಜಿಎಸ್ ಟಿ ಮೂಲಕ ಒಂದು ಬಾರಿ ತೆರಿಗೆ ಪಾವತಿಸುತ್ತಾನೆ.

ಸಾಮಾನ್ಯ ಜನರ ಮೇಲೆ ಜಿಎಸ್ ಟಿ  ಪರಿಣಾಮ

ಹೋಟೆಲ್‌ಗ‌ಳು, ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವನೆ ತುಟ್ಟಿ,  ಸೇವಾ ತೆರಿಗೆ ಶೇ.18ಕ್ಕೆ ನಿಗದಿಯಾದರೆ ದೂರವಾಣಿ ಬಿಲ್‌ ಮೊತ್ತ ಏರಿಕೆ,  ಆಮದು ಮಾಡಿದ ಫೋನ್‌ ಖರೀದಿ ದುಬಾರಿ.  ಆಭರಣಗಳ ಖರೀದಿ ಮೇಲೂ ತೆರಿಗೆ ಹೆಚ್ಚು ಬೀಳುವ ಕಾರಣ, ಚಿನ್ನದ ದರ ಏರಿಕೆ, ಇ-ಕಾಮರ್ಸ್‌ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುವ ಕಾರಣ ಆನ್‌ಲೈನ್‌ನಲ್ಲಿ ಖರೀದಿಸುವ ವಸ್ತುಗಳು ತುಟ್ಟಿ,  ಜಿಎಸ್‌ಟಿಯೊಳಗೇ ಎಕ್ಸೈಸ್‌ ಮತ್ತು ವ್ಯಾಟ್‌ ವಿಲೀನಗೊಳ್ಳುವ ಕಾರಣ ಸಿದ್ಧ ಉಡುಪುಗಳ ದರ ಇಳಿಕೆ, ತೆರಿಗೆ ದರ ಇಂತಿಷ್ಟೇ ಎಂದು ನಿಗದಿಯಾಗುವ ಕಾರಣ ಕಾರುಗಳ ಬೆಲೆ ಇಳಿಯಲಿವೆ, ಎಲ್‌ಇಡಿ ಟಿವಿಗಳು ಅಗ್ಗವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT