ಸುಪ್ರೀಂಕೋರ್ಟ್ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ವಿಳಂಬ ವಿಚಾರಣೆಗೆ ಸುಪ್ರೀಂ ಬೇಸರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ನಿರ್ಧರಿಸಿರುವ ಬೆನ್ನಲ್ಲೇ, ವಿಳಂಬ ತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಬೇಸರ ವ್ಯಕ್ತಪಡಿಸಿದೆ...

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ನಿರ್ಧರಿಸಿರುವ ಬೆನ್ನಲ್ಲೇ, ವಿಳಂಬ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಬೇಸರ ವ್ಯಕ್ತಪಡಿಸಿದೆ. 
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಿಸಿ. ಫೋಷ್, ಆರ್ ಎಫ್ ನಾರಿಮನ್ ಅವರಿದ್ದ ನ್ಯಾಯಪೀಠ, ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವವರ ವಿರುದ್ಧದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿತು. ಅಲ್ಲದೆ, ಮಾರ್ಚ್ 22ಕ್ಕೆ ವಿಚಾರಣೆಯನ್ನು ಮುಂದೂಡಿತು. 
ಮಾರ್ಚ್. 22 ರಂದು ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಹೊರಡಿಸುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳು ಮನೋಹರ ಜೋಷಿ, ಕೇಂದ್ರ ಸಚಿವೆ ಉಮಾ ಭಾರತಿ, ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮತ್ತು ಮತ್ತಿತರ ನಾಯಕರಿಗೆ ಬಾಬ್ರಿ ಮಸೀದಿ ರೂಪದಲ್ಲಿ ಕಂಟಕ ಎದುರಾಗಿದೆ. 
ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಅಡ್ವಾಣಿ, ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಹಾಗೂ ಮತ್ತಿತರರನ್ನು ಆರೋಪ ಮುಕ್ತಗೊಳಿಸಿತ್ತು. ಆದರೆ, ಸಿಬಿಐ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಸುಪ್ರೀಂನಲ್ಲಿ ಪ್ರಶ್ನೆ ಮಾಡಿತ್ತು. ಪ್ರಸ್ತುತ ಈ ಕುರಿತ ವಿಚಾರಣೆ ಕೂಡ ಮುಂದುವರೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT