ಪನ್ನೀರ್ ಸೆಲ್ವಂ 
ದೇಶ

122 ಎಐಎಡಿಎಂಕೆ ಶಾಸಕರು ನೆಮ್ಮದಿಯಾಗಿರಲು ಜಯಾ ಆತ್ಮ ಬಿಡುವುದಿಲ್ಲ: ಪನ್ನೀರ್ ಸೆಲ್ವಂ

ಮಾಜಿ ಸಿಎಂ ಗಳಾದ ಜಯಲಲಿತಾ ಮತ್ತು ಎಂಜಿ ರಾಮಚಂದ್ರನ್ ಆತ್ಮಗಳು, ವಿ.ಕೆ ಶಶಿಕಲಾ ಸೇರಿದಂತೆ ಎಐಎಡಿಎಂಕೆಯ 122 ಶಾಸಕರು ನೆಮ್ಮದಿಯಿಂದ ಇರಲು ...

ಚೆನ್ನೈ: ಮಾಜಿ ಸಿಎಂ ಗಳಾದ ಜಯಲಲಿತಾ ಮತ್ತು ಎಂಜಿ ರಾಮಚಂದ್ರನ್  ಆತ್ಮಗಳು,  ವಿ.ಕೆ ಶಶಿಕಲಾ ಸೇರಿದಂತೆ ಎಐಎಡಿಎಂಕೆಯ 122 ಶಾಸಕರು ನೆಮ್ಮದಿಯಿಂದ ಇರಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.

ಗ್ರೀನ್ ವೇಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸೆಲ್ವಂ ನಮ್ಮ ಧರ್ಮ ಯುದ್ಧ ಹಲವು ತಿರುವುಗಳನ್ನು ಪಡೆಯಲಿದೆ.ಎಲ್ಲಾ 122 ಶಾಸಕರು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ಎಂಜಿಆರ್ ಆತ್ಮಗಳು ಶಾಂತಿಯಿಂದ ಬದುಕಲು ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನನ್ನನ್ನು ಬಲವಂತವಾಗಿ ಸಿಎಂ ಹುದ್ದೆಯಿಂದ ಕೆಳಗಿಳಿಸಿದ ಶಶಿಕಲಾ ಮತ್ತು ಕೆಲವು ಸಚಿವರಿಗೆ ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಿ ಇನ್ನಷ್ಟು ಅವಮಾನ ವಾಗುತ್ತದೆ ಎಂದು ಹೇಳಿದ್ದಾರೆ.

ನನ್ನನ್ನು ಕಷ್ಟದ ಪರಿಸ್ಥಿತಿಗೆ ನೂಕಲಾಯಿತು, ನಾನು ಅವಮಾನಕ್ಕೊಳಗಾದೆ, ಶಶಿಕಲಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಒಪ್ಪಿಕೊಂಡ ನಂತರ ಎರಡು ರಾತ್ರಿ ನಿದ್ದೆಯಿಲ್ಲದೇ ಕಳೆದೆ ಎಂದು ಪನ್ನೀರ್ ಸೆಲ್ವಂ ಬೇಸರ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

ಮುಂಬೈ: ಗಂಟೆಗೆ 252 ಕಿ.ಮೀ ವೇಗದಲ್ಲಿ ಕಾರು ಚಾಲನೆ; ಲಾಂಬೋರ್ಘಿನಿ ಜಪ್ತಿ, FIR ದಾಖಲು

Suburban rail: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

SCROLL FOR NEXT