ಸಂಗ್ರಹ ಚಿತ್ರ 
ದೇಶ

ಮೀನುಗಾರರ ಬಿಡುಗಡೆಗೆ ಆಗ್ರಹಿಸಿ ಕೇಂದ್ರಕ್ಕೆ ತ.ನಾಡು ಸರ್ಕಾರ ಪತ್ರ ಬರೆದ ಬೆನ್ನಲ್ಲೇ ಲಂಕಾ ಸೇನೆಯಿಂದ ಗುಂಡಿನ ದಾಳಿ!

ಮೀನುಗಾರನನ್ನು ಕೊಂದ ಶ್ರೀಲಂಕಾ ಸೈನಿಕರ ದೌರ್ಜನ್ಯದ ವಿರುದ್ಧ ಇದೀಗ ತಮಿಳುನಾಡಿನಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಮೇಶ್ವರಂನಲ್ಲಿ ಸ್ಥಳೀಯ ಮೀನುಗಾರರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಚೆನ್ನೈ: ಮೀನುಗಾರನನ್ನು ಕೊಂದ ಶ್ರೀಲಂಕಾ ಸೈನಿಕರ ದೌರ್ಜನ್ಯದ ವಿರುದ್ಧ ಇದೀಗ ತಮಿಳುನಾಡಿನಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಮೇಶ್ವರಂನಲ್ಲಿ ಸ್ಥಳೀಯ ಮೀನುಗಾರರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡು ಸರ್ಕಾರ ಲಂಕಾ ಸೇನೆ ಬಂಧಿಸಿದ್ದ 85 ಮೀನುಗಾರರನ್ನು ಬಿಡುಗಡೆ ಮಾಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪತ್ರದಲ್ಲಿ ಮೀನುಗಾರರ ಬಿಡುಗಡೆ ಮತ್ತು ಅವರಿಂದ  ವಶಪಡಿಸಿಕೊಳ್ಳಲಾದ 128 ಬೋಟ್ ಗಳು ಮತ್ತು ಮೀನುಗಾರಿಕಾ ವಸ್ತುಗಳನ್ನು ವಾಪಸ್ ಕೊಡಿಸಬೇಕು ಎಂದು ಸಿಎಂ ಪಳನಿ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಪ್ರತಿನಿತ್ಯ ಭಾರತೀಯ  ಮೀನುಗಾರರು ಈ ಬಗ್ಗೆ ಸಮಸ್ಯೆ ಅನುಭವಿಸುತ್ತಿದ್ದು. ಈ ಕೂಡಲೇ ಇದಕ್ಕೆ ಶಾಶ್ವತ ಪರಿಹಾರ ಆಲೋಚಿಸಬೇಕು ಮತ್ತು ವಿದೇಶಾಂಗ ಇಲಾಖೆಯ ಮೂಲಕ ಬಂಧನಕ್ಕೀಡಾಗಿರುವ ಮೀನುಗಾರರನ್ನು ಬಿಡುಗಡೆ ಮಾಡಲು ಕ್ರಮ  ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಸೋಮವಾರ ಸಂಜೆ ಶ್ರೀಲಂಕಾ ಸೈನಿಕರು ಭಾರತೀಯ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದಾರೆ. ಘಟನೆಯಲ್ಲಿ ಓರ್ವ ಮೀನುಗಾರ ಸ್ಥಳದಲ್ಲೇ ಸಾವನ್ನಪ್ಪಿದ್ದು,  ಮತ್ತೋರ್ವನ ಕಾಲಿಗೆ ಗುಂಡು ತಗುಲಿದೆ. ಸಂಜೆ ವೇಳೆ ಘಟನೆ ಸಂಭವಿಸಿತಾದರೂ ಲಂಕಾ ಸೈನಿಕರಿಂದ ತಪ್ಪಿಸಿಕೊಂಡು ಮೃತ ದೇಹವನ್ನು ರಾಮೇಶ್ವರಂ ದಡಕ್ಕೆ ಸೇರಿಸುವಷ್ಟರಲ್ಲಿ ರಾತ್ರಿ 12.30 ಆಗಿತ್ತು ಎಂದು ರಾಮೇಶ್ವರಂ  ಮೀನುಗಾರರ ಒಕ್ಕೂಟದ ಅಧ್ಯಕ್ಷ ಪಿ ಶೇಷುರಾಜ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT