ಭಯೋತ್ಪಾದಕ ನಿಗ್ರಹ ದಳ 
ದೇಶ

ಉತ್ತರ ಪ್ರದೇಶ: ಶಂಕಿತ ಉಗ್ರನಿಂದ ಗುಂಡಿನ ದಾಳಿ; ಭದ್ರತಾ ಪಡೆಗಳ ಕಾರ್ಯಾಚರಣೆ

ಉತ್ತರಪ್ರದೇಶದ ಠಾಕೂರ್ ಗಂಜ್ ನ ಕಟ್ಟಡವೊಂದರಲ್ಲಿ ಶಂಕಿತ ಉಗ್ರನೊಬ್ಬ ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಯೋತ್ಪಾದನ ನಿಗ್ರಹ ದಳ...

ಲಖನೌ: ಉತ್ತರಪ್ರದೇಶದ ಠಾಕೂರ್ ಗಂಜ್ ನ ಕಟ್ಟಡವೊಂದರಲ್ಲಿ ಶಂಕಿತ ಉಗ್ರನೊಬ್ಬ ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಯೋತ್ಪಾದನ ನಿಗ್ರಹ ದಳ ಸಹ ಗುಂಡಿನ ದಾಳಿ ನಡೆಸಿದ್ದಾರೆ. 
ಶಂಕಿತ ಉಗ್ರನನ್ನು ಸೈಫುಲ್ ಎಂದು ಎಟಿಎಸ್ ಶಂಕಿಸಿದ್ದು ಕಟ್ಟಡದೊಳಗೆ ಅಡಗಿ ಕುಳಿತಿರುವ ಉಗ್ರನನ್ನು ಸೆರೆಹಿಡಿಯುವ ವಿಶ್ವಾಸವನ್ನು ಹಿರಿಯ ಪೊಲೀಸ್ ಅಧಿಕಾರಿ ದಾಲ್ಜಿತ್ ಚೌಧರಿ ತಿಳಿಸಿದ್ದಾರೆ. 
ಉಗ್ರ ಸೈಫುಲ್ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಹೊಂದಿರುವುದಾಗಿ ತಿಳಿದುಬಂದಿದ್ದು ಈ ಹಿನ್ನೆಲೆಯಲ್ಲಿ ಕಟ್ಟಡವನ್ನು ಸುತ್ತುವರೆದಿರುವ ಎಟಿಎಸ್ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 
ಸೈಫುಲ್ ಖಾಂಡ್ವಾ, ಮಧ್ಯಪ್ರದೇಶ ರೈಲು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿಯನ್ನು ಅಧಿಕಾರಗಳು ವ್ಯಕ್ತಪಡಿಸಿದ್ದಾರೆ. ಇನ್ನು ಕಾನ್ಪುರದಲ್ಲಿ ಓರ್ವ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT