ಸಂಗ್ರಹ ಚಿತ್ರ 
ದೇಶ

ದೆಹಲಿ ಹಿಟ್ ಆ್ಯಂಡ್ ರನ್ ಪ್ರಕರಣ: ಉದ್ಯಮಿ ಬಂಧನ

ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರನ್ನು ದೆಹಲಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರನ್ನು ದೆಹಲಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಮಾರ್ಚ್ 6 ರಂದು ಪಶ್ಚಿಮ ವಿಹಾರ ಪ್ರದೇಶದಲ್ಲಿ 17 ವರ್ಷದ ಅತುಲ್ ಅರೋರ ಎಂಬ ಯುವಕ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದಿದ್ದ ಮರ್ಸಿಡಿಸ್'ವೊಂದು ಯುವಕನ ಮೇಲೆ ಹರಿದು ಹೋಗಿತ್ತು. ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಇದೀಗ ಪ್ರಕರಣ ಸಂಬಂಧ 27 ವರ್ಷದ ಉದ್ಯಮಿಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 
ಅಪಘಾತ ಮಾಡಿದ ಮರ್ಸಿಡಿಸ್ ನ್ನು ರಜೌರಿ ಗಾರ್ಡೆನ್ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 
ಕುಡಿದ ಮತ್ತಿನಲ್ಲಿ ಉದ್ಯಮಿ ಕಾರು ಚಾಲನೆ ಮಾಡಿದ್ದಾರೆ. ಈ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ಆರೋಪಿಯೊಂದಿಗೆ ಆತನ ಗೆಳೆಯ ಕೂಡ ಕಾರಿನಲ್ಲಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ