ನಿರ್ಮಲಾ ಸೀತಾರಾಮನ್ 
ದೇಶ

ಡಿಜಿಟಲ್ ವಹಿವಾಟುಗಳಿಂದ ಸರ್ಕಾರಕ್ಕೆ ಹೆಚ್ಚಿನ ಉಳಿತಾಯ: ನಿರ್ಮಲಾ ಸೀತಾರಾಮನ್

ಎಲ್ಲಾ ವರ್ಗದವರನ್ನು ಬ್ಯಾಂಕಿಂಗ್ ವ್ಯವಸ್ಥೆಯಡಿ ತರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನಧಿಕೃತ ಆರ್ಥಿಕತೆಯನ್ನು ನಿರ್ಮೂಲನೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ...

ಪಾಂಡಿಚೆರಿ: ಎಲ್ಲಾ ವರ್ಗದವರನ್ನು ಬ್ಯಾಂಕಿಂಗ್ ವ್ಯವಸ್ಥೆಯಡಿ ತರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನಧಿಕೃತ ಆರ್ಥಿಕತೆಯನ್ನು ನಿರ್ಮೂಲನೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಹಿಂದುಳಿದ, ಬಡ ವರ್ಗಗಳನ್ನೂ ಗುರುತಿಸುವಂತಾಗಿದ್ದು, ಎಲ್ಲಾ ವರ್ಗಗಳ ಅಭಿವೃದ್ಧಿಗೂ ಪೂರಕವಾಗಿದೆ ಎಂದು ಡಿಜಿ ಧನ್ ಯೋಜನಾ ಸೆಮಿನಾರ್ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನು ಕೇಂದ್ರ ಸರ್ಕಾರ ಸಬ್ಸಿಡಿ ಹಣವನ್ನು ನೇರವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಿರುವುದರ ಬಗ್ಗೆಯೂ ಮಾತನಾಡಿರುವ ನಿರ್ಮಲಾ ಸೀತಾರಾಮನ್ ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸಿರುವುದರಿಂದ ಸರ್ಕಾರಕ್ಕೆ ಹೆಚ್ಚಿನ ಉಳಿತಾಯ ಸಾಧ್ಯವಾಗಿದೆ ಎಂದಿದ್ದಾರೆ. 
ಕೇಂದ್ರ ಸರ್ಕಾರದ ಮನ್ರೇಗಾ ಯೋಜನೆಗಳಂತಹ ಫಲಾನುಭವಿಗಳಿಗೆ ಡಿಬಿಟಿ ವ್ಯವಸ್ಥೆಯಿಂದ ನೇರ ಪಾವತಿ ಮಾಡುವುದರಿಂದ ಕೇಂದ್ರ ಸರ್ಕಾರ 27,000 ಕೋಟಿ ಉಳಿಸಲು ಸಾಧ್ಯವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT