ದೇಶ

ರೈಲ್ವೆ ಆಧುನೀಕರಣಕ್ಕೆ ಯುಎಇ ಹೂಡಿಕೆ ಕೋರಿದ ಭಾರತ

ರೈಲ್ವೆ ಆಧುನೀಕರಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವ ಭಾರತ ಸರ್ಕಾರ ಅರಬ್ ನಿಂದ ಹೂಡಿಕೆ ನಿರೀಕ್ಷಿಸುತ್ತಿದೆ ಎಂದು ರೈಲ್ವೆ ಇಲಾಖೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ದುಬೈ: ರೈಲ್ವೆ ಆಧುನೀಕರಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವ ಭಾರತ ಸರ್ಕಾರ ಅರಬ್ ನಿಂದ ಹೂಡಿಕೆ ನಿರೀಕ್ಷಿಸುತ್ತಿದೆ ಎಂದು ರೈಲ್ವೆ ಇಲಾಖೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ. 
ಮುಂದಿನ 5 ವರ್ಷಗಳಲ್ಲಿ ರೈಲ್ವೆ ಕ್ಷೇತ್ರದಲ್ಲಿ ಭಾರತ ಸರ್ಕಾರ 140 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದ್ದು, ಈ ಪೈಕಿ ಹೆಚ್ಚಿನದ್ದನ್ನು ರೈಲುಗಳ ಆಧುನೀಕರಣ, ಹೊಸ ತಂತ್ರಜ್ಞಾನ ಅಳವಡಿಕೆಗೆ ವ್ಯಯಿಸಲಾಗುವುದು ಹಾಗೂ ಹೂಡಿಕೆಗಾಗಿ ಅರಬ್ ನ ಹೂಡಿಕೆ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಸುರೇಶ್ ಪ್ರಭು ಮಾಹಿತಿ ನೀಡಿದ್ದಾರೆ. 
ಭಾರತೀಯ ಮೂಲಸೌಕರ್ಯದಲ್ಲಿ ಪ್ರಮುಖವಾಗಿ ರೈಲ್ವೆ ಕ್ಷೇತ್ರದಲ್ಲಿ ಹೂಡಿಕೆಗೆ ಅವಕಾಶ ಇರುವುದರ ಬಗ್ಗೆ ಯುಎಇ ಸರ್ಕಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಅವರೂ ಉತ್ಸುಕರಾಗಿದ್ದಾರೆ ಎಂದು ಸುರೇಶ್ ಪ್ರಭು ತಿಳಿಸಿದ್ದಾರೆ. 
ಅರಬ್ ಹೂಡಿಕೆ ಪ್ರಾಧಿಕಾರದೊಂದಿಗೆ ಸಕಾರಾತ್ಮಕ ಸಭೆ ನಡೆದಿದೆ. 2017 ರಲ್ಲೇ ರೈಲ್ವೆ ವಲಯದಲ್ಲಿ ಅರಬ್ ಹೂಡಿಕೆಗೆ ಸಂಬಂಧಿಸಿದಂತೆ ಪ್ರಗತಿಯಾಗಲಿದೆ ಎಂದು ಸುರೇಶ್ ಪ್ರಭು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅರಬ್ ಅತಿ ಹೆಚ್ಚು ಸಾರ್ವಭೌಮ ಸಂಪತ್ತು ನಿಧಿ ಇರುವ ವಿಶ್ವದ ಮೂರನೇ ರಾಷ್ಟ್ರವಾಗಿದ್ದು ಸುಮಾರು 92 ಬಿಲಿಯನ್ ಡಾಲರ್ ನಷ್ಟು ಸ್ವತ್ತುಗಳನ್ನು ಹೊಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT